ಬ್ರೇಕಿಂಗ್ ನ್ಯೂಸ್
10-09-21 10:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.10 : ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನು ಬೇಕಾದರೂ ಮಾಡುತ್ತದೆ. ಆದರೆ ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್ಎಸ್ಎಸ್ ಸ್ಥಾಪಿಸಿದ್ದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್ಎಸ್ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ.
ಈ ಮುನ್ನ ಸೆ.6ರಂದು ಟ್ವೀಟ್ ಮಾಡಿದ್ದ ಚೇತನ್, ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನ್ನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು.
Actor Chetan makes controversial statement about congress and BJP.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm