ಬ್ರೇಕಿಂಗ್ ನ್ಯೂಸ್
14-09-21 04:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.14: ಬಾಯಲ್ಲಿ ಹಿಂದೂ ಹಿಂದೂ ಅಂತಾರೆ, ಈಗ ಹಿಂದುಗಳ ದೇವಸ್ಥಾನಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಂದನ್ನು ಕೆಡವಿದ ಅಲ್ಲಿನ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿರುವಾಗಲೇ ವಿರೋಧ ಪಕ್ಷಗಳ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಜೆಡಿಎಸ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್.ಡಿ.ರೇವಣ್ಣ, ಕೆಲವರು ಜೆಡಿಎಸ್ ಮುಳುಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದೂ ಗೊತ್ತಿದೆ. ಸಮುದ್ರದಲ್ಲಿ ಮುಳುಗೇಳುವ ಸಬ್ಮೆರಿನ್ ಮೆಷಿನ್ ನಮ್ಮ ಬಳಿ ಇದೆ. ಯಾವಾಗ ಹಡಗು ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಎಂದು ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಸಬ್ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. ಕಲಬುರಗಿ ಪಾಲಿಕೆ ಬಗ್ಗೆ ಖರ್ಗೆ ಮಾತನಾಡಿದ್ದಾರೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಅನ್ನು ಅವಲಂಬಿಸಿವೆ. ಅತ್ತ ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿರುವ ಜೆಡಿಎಸ್, ಯಾವ ಪಕ್ಷದೊಂದಿಗೆ ಕೈ ಜೋಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ರೇವಣ್ಣ, ಮುಳುಗಿದ ಹಡಗಿನ ಜೊತೆ ಏಕೆ ಬರ್ತೀರಾ? ಮುಳುಗುವ ಹಡಗಿನ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ. ಇದರಿಂದ ಬೊಮ್ಮಾಯಿ ಅವರ ಸೀಟಿಗೆ ಕುತ್ತು ಬರುವುದು ಬೇಡ ಎಂದು ಲೇವಡಿ ಮಾಡಿದ್ದರು.
JDS Leader HD Revanna slams state BJP Govt over Temple Demolition Controversy.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm