ಬ್ರೇಕಿಂಗ್ ನ್ಯೂಸ್
14-09-21 04:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.14: ಬಾಯಲ್ಲಿ ಹಿಂದೂ ಹಿಂದೂ ಅಂತಾರೆ, ಈಗ ಹಿಂದುಗಳ ದೇವಸ್ಥಾನಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಂದನ್ನು ಕೆಡವಿದ ಅಲ್ಲಿನ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿರುವಾಗಲೇ ವಿರೋಧ ಪಕ್ಷಗಳ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಜೆಡಿಎಸ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್.ಡಿ.ರೇವಣ್ಣ, ಕೆಲವರು ಜೆಡಿಎಸ್ ಮುಳುಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದೂ ಗೊತ್ತಿದೆ. ಸಮುದ್ರದಲ್ಲಿ ಮುಳುಗೇಳುವ ಸಬ್ಮೆರಿನ್ ಮೆಷಿನ್ ನಮ್ಮ ಬಳಿ ಇದೆ. ಯಾವಾಗ ಹಡಗು ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಎಂದು ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಸಬ್ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. ಕಲಬುರಗಿ ಪಾಲಿಕೆ ಬಗ್ಗೆ ಖರ್ಗೆ ಮಾತನಾಡಿದ್ದಾರೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಅನ್ನು ಅವಲಂಬಿಸಿವೆ. ಅತ್ತ ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿರುವ ಜೆಡಿಎಸ್, ಯಾವ ಪಕ್ಷದೊಂದಿಗೆ ಕೈ ಜೋಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ರೇವಣ್ಣ, ಮುಳುಗಿದ ಹಡಗಿನ ಜೊತೆ ಏಕೆ ಬರ್ತೀರಾ? ಮುಳುಗುವ ಹಡಗಿನ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ. ಇದರಿಂದ ಬೊಮ್ಮಾಯಿ ಅವರ ಸೀಟಿಗೆ ಕುತ್ತು ಬರುವುದು ಬೇಡ ಎಂದು ಲೇವಡಿ ಮಾಡಿದ್ದರು.
JDS Leader HD Revanna slams state BJP Govt over Temple Demolition Controversy.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm