ಬ್ರೇಕಿಂಗ್ ನ್ಯೂಸ್
17-09-21 11:35 am Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ಪಿಯುಸಿ ಓದುತ್ತಿದ್ದ ಹುಡುಗನೊಬ್ಬ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ವ್ಯಕ್ತಿಯ 6 ಅಡಿ ಅಂತರದಲ್ಲಿ ಬಿದ್ದಿದೆ. ನಿವೃತ್ತ ಹವಾಲ್ದಾರ್ ಆಗಿರುವ ತಂದೆಯ ಲೈಸೆನ್ಸ್ ಇರುವ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ರಾಹುಲ್ ಎಸ್ಎಸ್ಎಲ್ಸಿಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ.
ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಬೆಳಗ್ಗೆ 4 ಗಂಟೆಗೆ ಎದ್ದು ಓದಿಕೊಂಡಿದ್ದ. ಇದರ ನಡುವೆ ಮನೆಯಿಂದ ಹೊರಗೆ ಬಂದು ವಾಕಿಂಗ್ ಮಾಡುತ್ತಿದ್ದ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್ಗೆ ಬರುತ್ತಿದ್ದ. ಆದರೆ ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.




ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ಇದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ.
ವಿದ್ಯಾರ್ಥಿ ರಾಹುಲ್, ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಯ ಪುತ್ರನಾಗಿದ್ದು, ಭಗತ್ ಸಿಂಗ್ ಅವರು ಸೇನೆಯ ನಿವೃತ್ತ ಹವಾಲ್ದಾರ್ ಆಗಿದ್ದಾರೆ. ಉತ್ತರಾಖಂಡ್ ಮೂಲದವರಾದ ಭಗತ್ ಸಿಂಗ್, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆರ್.ಟಿ.ನಗರದ ಗಂಗಾ ಬೇಕರಿ ಬಳಿ ಮನೆ ಮಾಡಿಕೊಂಡು ವಾಸವಾಗಿದ್ದಾರೆ.
2nd puc student suicide by shooting Bangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm