ಬ್ರೇಕಿಂಗ್ ನ್ಯೂಸ್
22-09-21 12:19 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ. ಮಹೇಶ್ ನಡುವಿನ ಸಮರದ ಪ್ರತಿಧ್ವನಿ ವಿಧಾನಸಭೆಯಲ್ಲಿ ಕೇಳಿಬಂತು. ಸಾರಾ ಮಹೇಶ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನು ಸರಕಾರ ಸಹಿಸುವುದಿಲ್ಲ ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸಾ.ರಾ. ಮಹೇಶ್ ಮಂಡಿಸಿದ್ದ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.

ಅಧಿಕಾರಿ ತನ್ನ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಅದು ತಪ್ಪಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ ನಗರ ಶಾಸಕ ಸಾರಾ ಮಹೇಶ್, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವ ಬಗ್ಗೆ ಸದನದಲ್ಲಿ ಫೋಟೋ ತೋರಿಸಿ ವಿಧಾನಸಭೆಯ ಗಮನಸೆಳೆದರು.
ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿ ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.
sa ra mahesh lashes out at rohini sindhuri in assembly session just protocol violation from ias officer says jc madhu swamy
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm