ಬ್ರೇಕಿಂಗ್ ನ್ಯೂಸ್
30-09-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.30 : ಬಿಬಿಎಂಪಿ ಅಧಿಕಾರಿಗಳು ಕಡೆಗೂ ದಂಡ ಪ್ರಯೋಗ ಮಾಡಿದ್ದಾರೆ. 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಷ್ಠಿತ ಮಂತ್ರಿ ಮಾಲ್ ಕಟ್ಟಡಕ್ಕೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿರಲಿಲ್ಲ. ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ತೆರಿಗೆ ಪಾವತಿಯಾಗದ ಕಾರಣ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ಚಿಮ ಡಿಸಿಪಿ ಪ್ರಸನ್ನ ಕುಮಾರ್ ಮಾಹಿತಿ ನೀಡಿದ್ದಾರೆ
2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. ಬಳಿಕ 5 ಕೋಟಿ ರೂ. ಪಾವತಿಸಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರು. ಆದರೆ, ಸೆಪ್ಟೆಂಬರ್ ಒಳಗಡೆ ತೆರಿಗೆ ಪಾವತಿಸದಿದ್ದರೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು.

ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಾ ಬಂದಿದೆ. ಆದರೆ, 2017ರಿಂದ ಇದುವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿತ್ತು. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
Malleshwaram Mantri Mall Fails to Pay Property Tax BBMP Officilas Close the Mall.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm