ಬ್ರೇಕಿಂಗ್ ನ್ಯೂಸ್
01-10-21 11:12 am Headline Karnataka News Network ಕರ್ನಾಟಕ
ಬೆಂಗಳೂರು, ಅ.1 : ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರಕಾರ 2016 ರಲ್ಲಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕ ಸದಸ್ಯ ಪೀಠವು ಈ ಆದೇಶ ಮಾಡಿದೆ.
ಹೊಸ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲು ಅರ್ಜಿಯಲ್ಲಿ 6ನೇ ಪ್ರತಿವಾದಿಯಾಗಿರುವ ಬಾಳಿಗಾ ಸಹೋದರಿ ಅನುರಾಧಾ ಬಾಳಿಗಾ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲು ಮುಕ್ತ ಅವಕಾಶ ಹೊಂದಿದ್ದಾರೆ. ಒಂದೊಮ್ಮೆ ಬಾಳಿಗಾ ಸಹೋದರಿ ಅನುರಾಧಾ ಮನವಿ ಸಲ್ಲಿಸಿದರೆ, ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ರಾಜ್ಯ ಸರಕಾರಕ್ಕೆ ಪೀಠ ನಿರ್ದೇಶಿಸಿದೆ.

ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು 2016ರ ಮಾ.21ರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿ 2016ರ ಡಿ.21ರಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿನಿಂದಲೂ ನ್ಯಾಯಾಲಯಗಳಲ್ಲಿ ದೂರುದಾರರ ಪರವಾಗಿ ಮತ್ತು ಮೃತ ಕುಟುಂಬದವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳಲ್ಲಿ ರವೀಂದ್ರನಾಥ್ ಕಾಮತ್ ವಾದ ಮಂಡಿಸಿದ್ದಾರೆ. ಕೊಲೆಯ ನಂತರ ನಡೆದ ಹಲವು ಪ್ರತಿಭಟನೆಗಳಲ್ಲಿ ಕಾಮತ್ ಭಾಗವಹಿಸಿದ್ದರು. ಮೃತರ ತಂದೆ ನಡೆಸಿದ ಸುದ್ದಿಗೋಷ್ಠಿಯಲ್ಲೂ ಪಾಲ್ಗೊಂಡು ನನ್ನ ವಿರುದ್ಧ ಹೇಳಿಕೆ ನೀಡಿದ್ದರು. ಮೃತನ ಕುಟುಂಬದವರ ಮನವಿ ಮೇರೆಗೆ ರವೀಂದ್ರನಾಥ್ ಅವರನ್ನೇ ಎಸ್ಪಿಪಿಯಾಗಿ ನೇಮಿಸಲಾಗಿದೆ. ಹೀಗಾಗಿ, ಕಾಮತ್ ಎಸ್ಪಿಪಿಯಾಗಿ ಮುಂದುವರಿದರೆ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ. ಆದ್ದರಿಂದ, ಅವರ ನೇಮಕಾತಿ ರದ್ದುಪಡಿಸಬೇಕು ಎಂದು ಆರೋಪಿ ನರೇಶ್ ಶೆಣೈ ಕೋರಿದ್ದರು.
RTI Activist Vinayak Baliga killing Karntaka HC Orders for Removal of SSP Ravindranath Kamath
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm