ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.


ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm