ಬ್ರೇಕಿಂಗ್ ನ್ಯೂಸ್
04-10-21 05:44 pm Headline Karnataka News Network ಕರ್ನಾಟಕ
ವಿಜಯಪುರ, ಅ.4: ಬೆಂಗಳೂರು ಡ್ರಗ್ಸ್ ಪ್ರಕರಣದಲ್ಲಿಯೂ ಪ್ರಭಾವಿ ರಾಜಕಾರಣಿಗಳ ಮಕ್ಕಳು, ಸಿನಿಮಾ ನಟರು ಇದ್ದಾರೆ. ಅದೇ ಕಾರಣಕ್ಕೆ ಡ್ರಗ್ಸ್ ಕೇಸ್ ನಲ್ಲಿ ಸೀಮಿತ ತನಿಖೆ ನಡೆದಿದೆ. ಅರ್ಧಕ್ಕೆ ತನಿಖೆ ನಡೆಸಿ ಇಡೀ ಪ್ರಕರಣ ಮುಚ್ಚಿ ಹಾಕಿದ್ದಾರೆ. ಆಳವಾಗಿ ತನಿಖೆ ನಡೆದಿದ್ದರೆ ಕೈ ಶಾಸಕರ ಕೈವಾಡ ಬಯಲಿಗೆ ಬರ್ತಿತ್ತು. ಡ್ರಗ್ಸ್ ಕೇಸ್ ನಲ್ಲಿ ಕಾಂಗ್ರೆಸ್ ಶಾಸಕರೂ ಇದ್ದರು, ಬಿಜೆಪಿಯ ಕೆಲವು ಶಾಸಕರ ಮಕ್ಕಳ ಹೆಸರೂ ಬಂದಿತ್ತು ಎಂದು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.
ಡ್ರಗ್ಸ್ ಮಾಫಿಯಾ ಭಯೋತ್ಪಾದನೆಯ ಒಂದು ಭಾಗವೇ ಆಗಿದೆ. ಬಾಲಿವುಡ್ ಸೇರಿದಂತೆ ನಮ್ಮ ಸಿನಿಮಾ ನಟರು ಡ್ರಗ್ಸ್ ಮಾಫಿಯಾದ ಭಾಗವಾಗಿದ್ದಾರೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.
ಡ್ರಗ್ಸ್ ಮೂಲಕ ಹಿಂದೂ ಯುವಕರನ್ನ ಟಾರ್ಗೆಟ್ ಮಾಡಲಾಗಿದೆ. ಹಿಂದುಗಳನ್ನ ಡ್ರಗ್ಸ್ ಮಾಫಿಯಾಗೆ ಬಲಿ ಕೊಡಲಾಗ್ತಿದೆ. ಹಿಂದು ಯುವಕರ ಯೌವನವನ್ನು ಹಾಳು ಮಾಡಲಾಗ್ತಿದೆ. ಡ್ರಗ್ಸ್ ಮೂಲಕ ಹಿಂದುಗಳಲ್ಲಿ ನಪುಂಸಕತ್ವ ಹೆಚ್ಚಾಗಿ, ಹಿಂದುಗಳ ಜನಸಂಖ್ಯೆ ಕಡಿಮೆ ಮಾಡಬೇಕು ಎನ್ನುವ ಉದ್ದೇಶ ಇದರ ಹಿಂದಿದೆ. ಇಂಥ ಹಿಡನ್ ಅಜೆಂಡಾ ಇಟ್ಕೊಂಡು ದಂಧೆ ನಡೆಸುತ್ತಿದ್ದರೂ ನಮ್ಮ ಸರ್ಕಾರ ಇದ್ದೂ ಏನು ಮಾಡಲಾಗ್ತಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.


ಶಾರುಖ್ ಪುತ್ರ ಡ್ರಗ್ಸ್ ಪ್ರಕರಣದಲ್ಲಿ ಬಂಧನ ಆಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಖಾನ್ ಗಳ ಬಗ್ಗೆ ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ. ಖಾನ್ ಗಳಿಂದ ದೇಶ ಸುರಕ್ಷಿತ ಅಲ್ಲ. ಅವರು ದೇಶ ಬಿಡಲಿ. ಆ ಮಕ್ಕಳೆಲ್ಲ ನೇರವಾಗಿ ಅಫ್ಘಾನಿಸ್ತಾನಕ್ಕೆ ಹೋಗಲಿ. ಸುರಕ್ಷಿತವಾಗಿ ತಾಲಿಬಾನ್ ಕೈಕೆಳಗೆ ನಟನೆ ಮಾಡಿಕೊಂಡು ಇರಲಿ ಎಂದು ವ್ಯಂಗ್ಯವಾಡಿದ್ದಾರೆ.
ದೇಶದಲ್ಲಿ ಹಿಂದುಗಳು ಸಿನಿಮಾ ನೋಡುತ್ತಾರೆ. ಇವರು ಸಾವಿರಾರು ಕೋಟಿ ಗಳಿಕೆ ಮಾಡುತ್ತಾರೆ. ಅವರ ಮಕ್ಕಳೆಲ್ಲ ಮಜಾ ಮಾಡಿಕೊಂಡು ದೇಶದ ವ್ಯವಸ್ಥೆ ಕೆಡಿಸುತ್ತಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕ ಸ್ಥಿತಿ ಡ್ರಗ್ಸ್ ಮೇಲೆ ನಿಂತಿದೆ. ಡ್ರಗ್ಸ್ ಕಟ್ ಮಾಡಿದರೆ, ಭಯೋತ್ಪಾದನೆ ತಡೆಯಬಹುದು ಎಂದು ಯತ್ನಾಳ್ ಹೇಳಿದ್ದಾರೆ.
Congress and BJP leaders are involved in drugs case along with film stars sparks another controversial statement Basangouda Patil Yatnal.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm