ಬ್ರೇಕಿಂಗ್ ನ್ಯೂಸ್
14-10-21 01:31 pm Mangaluru Correspondent ಕರ್ನಾಟಕ
ತುಮಕೂರು, ಅ.14: ಎಲ್ಲೋ ಒಂದು ಕಡೆ ಪಕ್ಷ ನನಗೆ ದ್ರೋಹ ಮಾಡ್ತಾ ಇದೆ ಅನ್ನುವ ಮಟ್ಟಕ್ಕೆ ಬಂದಿದೆ. ನಾವು ಕೇಳೋ ವರೆಗೂ ಕೇಳ್ಕೊಂಡು ಬಂದಿದ್ದೇವೆ. ರಾಜ್ಯಾಧ್ಯಕ್ಷರನ್ನ ಕೇಳಿದ್ದೇವೆ, ಮುಖ್ಯಮಂತ್ರಿಗಳನ್ನ ಕೇಳಿದ್ದೇವೆ. ನಮ್ಮನ್ನು ಕಡೆಗಣಿಸಿದ್ರೆ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಇರೋಲ್ಲ... ಹೀಗೆಂದು ಬಿಜೆಪಿ ರಾಜ್ಯ ಸರಕಾರದ ವಿರುದ್ಧ ತುಮಕೂರು ಜಿಲ್ಲೆಯ ಬಿಜೆಪಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಮಸಾಲ ಜಯರಾಂ ಪಕ್ಷ ಮತ್ತು ಸರಕಾರ ತನ್ನನ್ನು ಕಡೆಗಣಿಸಿದರೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಪಕ್ಷದಲ್ಲಿ ಇರೋಲ್ಲಾ ಅಂದ್ರೆ ರಾಜಕೀಯನೇ ಕಡೆ ಮಾಡ್ತೀವಿ. ನಮ್ಮ ತಾಳ್ಮೆಗೂ ಒಂದು ಸಹಕಾರ ಇರಬೇಕು ಈ ತಿಂಗಳ ಅಂತ್ಯಕ್ಕೆ ಗಡುವು ಕೊಟ್ಟಿದ್ದೇವೆ. ನವಂಬರ್ ಅಂತ್ಯದ ವರೆಗೂ ನೋಡ್ತೀವಿ, ನಾವೇನೂ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲಾ. ಒಳ್ಳೆಯ ನಿಗಮ ಕೊಡಿ ಅಂತಾ ಕೇಳಿದ್ದೇವೆ, ಕೊಟ್ರೆ ಕೊಡಲಿ ಇಲ್ಲಾ ಅಂದ್ರೆ ನಾವು ಏನ್ ಮಾಡಬೇಕೋ ಮಾಡ್ತೀವಿ. ಜನ ಓಟ್ ಹಾಕಿದ್ದಾರೆ, ಅವರಿಗೆ ತೃಪ್ತಿ ಆಗೋ ಹಾಗೇ ಕೆಲಸ ಮಾಡಿದ್ದೇನೆ.
ಈ ತಿಂಗಳ ಗಡುವು ಕೊಡ್ತೀನಿ ಕೊಟ್ರೆ ಕೊಡಲಿ ಕೊಡಲಿಲ್ಲ ಅಂದ್ರೆ ಬೇಡ.. ನನಗೆ ಹಂಗೇ ಕೆಲಸ ಮಾಡೋ ತಾಕತ್ತಿದೆ ಅಂತಾ ಹೇಳ್ತೀನಿ. ಯಾವುದಾದ್ರು ಸರಿ ಒಳ್ಳೆದೊಂದು ನಿಗಮ ಕೊಡಿ. ಸಾಂಬರು ಅಭಿವೃದ್ಧಿ ನಿಗಮದಲ್ಲಿ ಹತ್ತು ರೂಪಾಯಿ ದುಡ್ಡಿಲ್ಲ. ನಾನೇ ಊಟ ತಗೊಂಡೋಗಿ ಕೊಟ್ಟು ಬರಬೇಕು. ಅಂಥ ನಿಗಮ ನಮಗ್ಯಾಕೆ ಬೇಕು, ಜಿಲ್ಲಾಧ್ಯಕ್ಷ ಸ್ಥಾನವೂ ಬೇಡ. ನಮ್ಮ ಅಹವಾಲು ಕೇಳದಿದ್ದರೆ ನಮ್ಮ ಮುಂದಿನ ನಡೆ ನಾವು ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿಗೆ ಶಾಸಕ ಮಸಾಲ ಜಯರಾಂ ಹೇಳಿದ್ದಾರೆ.
Tumakuru district Turuvekere BJP MLA Masala Jayaram threatens of quitting BJP if good post if not given to him.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm