ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm