ಬ್ರೇಕಿಂಗ್ ನ್ಯೂಸ್
21-10-21 06:02 pm Headline Karnataka News Network ಕರ್ನಾಟಕ
ನವದೆಹಲಿ, ಅ 21: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಗುರುವಾರ ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಆರೋಪಿ ಮೋಹನ್ ನಾಯಕ್ ವಿರುದ್ಧದ ಈ ಕೋಕಾ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಮರುಸ್ಥಾಪನೆ ಮಾಡಿದೆ.
ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಸಿ ಟಿ ರವಿಕುಮಾರ್ರನ್ನು ಒಳಗೊಂಡ ತ್ರಿಸದಸ್ಯರ ಸುಪ್ರೀಂಕೋರ್ಟ್ ನ್ಯಾಯಪೀಠವು, ಈ ಬಗ್ಗೆ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಈ ವರ್ಷದ ಏಪ್ರಿಲ್ 22 ರಂದು ರಾಜ್ಯ ಸರ್ಕಾರ ಹಾಗೂ ಗೌರಿ ಸಹೋದರಿ ಕವಿತಾ ಲಂಕೇಶ್ ಅರ್ಜಿ ವಿಚಾರಣೆಗೆ ಅನುಮತಿ ನೀಡಿತ್ತು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಕೋಕಾ) ಆರೋಪ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ, ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರಿಗೆ ನೋಟಿಸ್ ನೀಡಿತ್ತು. ಆರೋಪಿ ವಿರುದ್ಧ ಕೋಕಾ ಆರೋಪ ಮರುಸ್ಥಾಪನೆ ಮಾಡುವ ಮೂಲಕ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ.
ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೊಲೀಸ್ ಆಯುಕ್ತರು 2018ರಲ್ಲಿ ನೀಡಿದ್ದ ಆದೇಶ ಹಾಗೂ ಆ ಬಳಿಕದ ಪೂರಕ ಆರೋಪ ಪಟ್ಟಿಯನ್ನು 2021 ರ ಏಪ್ರಿಲ್ 22 ರಂದು ವಜಾ ಮಾಡಿತ್ತು. ಈ ಸಂಬಂಧ ಕವಿತಾ ಲಂಕೇಶ್ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್ ಆದೇಶದಂತೆ ಮೋಹನ್ ನಾಯಕ್ ವಿರುದ್ಧದ ಕೋಕಾ ಕಾಯಿದೆಯ ಕೆಸಿಒಸಿಎ ಸೆಕ್ಷನ್ 3 (1) (i), 3 (2), 3 (3) ಮತ್ತು 3 (4) ಅಡಿಯಲ್ಲಿ ನಿಗದಿಪಡಿಸಲಾಗಿದ್ದ ಆರೋಪಗಳನ್ನು ಕೈಬಿಡಲಾಗಿತ್ತು. ಈಗ ಮರುಸ್ಥಾಪನೆ ಮಾಡಲಾಗಿದೆ.
ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯಲ್ಲಿ, ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆಯಡಿ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದ ಬಳಿಕ ಆತ ಕಳೆದ ಕೆಲ ತಿಂಗಳು ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಈಗ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ಸಂಪೂರ್ಣವಾಗಿದೆ, ಆದೇಶ ನೀಡುವುದು ಬಾಕಿ ಉಳಿದಿದೆ ಎಂದು ಉಲ್ಲೇಖ ಮಾಡಲಾಗಿತ್ತು.

"ಮೋಹನ್ ನಾಯಕ್ ಅಪರಾಧಕ್ಕೆ ಮೊದಲು ಮತ್ತು ನಂತರ ಕೊಲೆಗಾರರಿಗೆ ಆಶ್ರಯ ನೀಡುವ ಸಹಾಯ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಹಲವಾರು ಪಿತೂರಿ, ಸಂಚು ರೂಪಿಸುವಲ್ಲಿ ತೊಡಗಿಕೊಂಡಿದ್ದ ಎಂಬುದು ತನಿಖೆ ದೃಢಪಡಿಸಿದೆ," ಎಂದು ಆರೋಪ ಮಾಡಿದ್ದಾರೆ. "ಆತ ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂಬುವುದು ತನಿಖೆಯಲ್ಲಿ ಖಚಿತವಾಗಿದೆ. ಆತ ಆರಂಭದಿಂದಲೂ ಒಂದನೇ ಆರೋಪಿ ಅಮೋಲ್ ಕಾಳೆ ಜೊತೆ ಹಾಗೂ ಎಂಟನೇ ಆರೋಪಿ ಶಸ್ತ್ರಾಸ್ತ್ರ ತರಬೇತುದಾರ ರಾಜೇಶ್ ಡಿ ಬಂಗೇರ ಜೊತೆ ನಿಕಟ ಸಂಪರ್ಕದಲ್ಲಿದ್ದನು. ಆತ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾ ಸಂಸ್ಥೆ ಸಾಕಷ್ಟು ಸಾಕ್ಷ್ಯಗಳನ್ನು ಹೊಂದಿದೆ," ಎಂದು ಕೂಡಾ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಇನ್ನು ಗೌರಿ ಹತ್ಯೆ ಮಾತ್ರವಲ್ಲದೆ ಅನೇಕ ಸಂಘಟಿತ ಅಪರಾಧಗಳನ್ನು ಎಸಗಿದ ಅಮೋಲ್ ಕಾಳೆ ನೇತೃತ್ವದ ಗುಂಪಿನೊಂದಿಗೆ ಮೋಹನ್ ನಾಯಕ್ ನಂಟು ಹೊಂದಿದ್ದಾನೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
The Supreme Court on Thursday restored the charges under Karnataka Control of Organised Crimes Act (KCOCA) against accused Mohan Nayak in the Gauri Lankesh murder cases for September 8, 2021. Allowing an appeal filed by Gauri Lankesh's sister Kavita Lankesh, a bench comprising Justices Khanwilkar, Dinesh Maheshwari and CT Ravikumar set aside the judgment of the Karnataka High Court which had quashed the KCOCA charges against Mohan Nayak
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm