ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm