ಬ್ರೇಕಿಂಗ್ ನ್ಯೂಸ್
04-11-21 04:27 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನ.2 ರಂದು ರಾತ್ರಿ ನಟ ವಿಜಯ ಸೇತುಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುತ್ತಿದ್ದ ವೇಳೆ ಸಹ ಪ್ರಯಾಣಿಕನ ಜೊತೆ ಕಿರಿಕ್ ಆಗಿತ್ತು. ಆನಂತರ, ವಿಜಯ್ ವಿಮಾನ ಇಳಿದು ಏರ್ಪೋರ್ಟ್ ನಲ್ಲಿ ಹೊರಗಡೆ ನಡೆದು ಬರುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಏರ್ಪೋರ್ಟ್ ಠಾಣೆಗೆ ನಟ ಮತ್ತು ಜೊತೆಗಿದ್ದ ಗೆಳೆಯರು ತೆರಳಿದ್ದರು. ಆದರೆ ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸದೆ, ಮುಚ್ಚಳಿಕೆ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೈದ ದೃಶ್ಯ ತಮಿಳುನಾಡಿನಲ್ಲಿ ವೈರಲ್ ಆಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮಿಳು ವಾಹಿನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ, ಅವರು ಪುನೀತ್ ಸಮಾಧಿಗೂ ನಮನ ಸಲ್ಲಿಸಿ ತೆರಳಿದ್ದರು.
Actor #VijaySethupathi attacked at Bengaluru airport. Initial reports say the incident happened yesterday night. More details awaited... pic.twitter.com/07RLSo97Iw
— Janardhan Koushik (@koushiktweets) November 3, 2021
A drunk fan tried to attack the personal assistant of Tamil movie star Vijay Sethupathi after he was allegedly not allowed to take a selfie at the Bengaluru airport on Tuesday night, police officials said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm