ಬ್ರೇಕಿಂಗ್ ನ್ಯೂಸ್
12-09-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 12: ಜೆಡಿಎಸ್ ಪಕ್ಷದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಶ್ರೀಲಂಕಾ ಪ್ರವಾಸ ಹೋಗಿದ್ದು ನಿಜ. ಹಾಗೆಂದು ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿಯರ ಜೊತೆ ಕೊಲಂಬೋಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಯಾಗಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಒಂದಾನೊಂದು ಕಾಲದಲ್ಲಿ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋಗೆ ಪ್ರವಾಸ ಹೋಗಿದ್ದಾಗಿ ಹೇಳಿಕೆ ನೀಡಿದ್ದು ಎತ್ತಣ ಮಾಮರ, ಎತ್ತಣ ಕೋಗಿಲೆ ಎಂಬಂತಾಗಿದೆ ಎಂದಿದ್ದಾರೆ.
2014ರ ಜೂನ್ ತಿಂಗಳಲ್ಲಿ ಪಕ್ಷದ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಶ್ರೀಲಂಕಾಗೆ ಹೋಗುವುದಾಗಿ ಬಹಿರಂಗವಾಗೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೆ, ಅಲ್ಲಿ ಶಾಸಕರ ಜೊತೆ ನಡೆದ ಮಾತುಕತೆಗಳ ಬಗ್ಗೆ ದೃಶ್ಯಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ. ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಚರ್ಚಿಸಲು ಕೊಲಂಬೋಗೆ ಹೋಗುವುದು ದುಬಾರಿಯಲ್ಲದ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಅದೇ ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿದ್ದಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ
ಚಾಚಿ ಕೊಂಡಿರುವುಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಎಂದು ಪುರಂದರದಾಸರ ಕೀರ್ತನೆಯನ್ನು ಉಲ್ಲೇಖಿಸಿ ಜಮೀರ್ ಅಹ್ಮದ್ ವಿರುದ್ಧ ಜಾಡಿಸಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜೊತೆ ಲಿಂಕ್ ಹೊಂದಿರುವ ಆರೋಪ ಜಮೀರ್ ಅಹ್ಮದ್ ಮೇಲೆ ಕೇಳಿಬರುತ್ತಿದ್ದಂತೆ ಕೊಲಂಬೋಗೆ ಹೋಗಿರುವ ವಿಚಾರದಲ್ಲಿ ಕುಮಾರಸ್ವಾಮಿಯನ್ನು ಎಳೆತರಲು ಪ್ರಯತ್ನ ಮಾಡಿದ್ದರು.
ಆಚಾರವಿಲ್ಲದ ನಾಲಿಗೆ ನಿನ್ನ
— H D Kumaraswamy (@hd_kumaraswamy) September 12, 2020
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಪುರಂದರ ದಾಸರು
6/6
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm