ಬ್ರೇಕಿಂಗ್ ನ್ಯೂಸ್
12-09-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 12: ಜೆಡಿಎಸ್ ಪಕ್ಷದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಶ್ರೀಲಂಕಾ ಪ್ರವಾಸ ಹೋಗಿದ್ದು ನಿಜ. ಹಾಗೆಂದು ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿಯರ ಜೊತೆ ಕೊಲಂಬೋಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಯಾಗಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಒಂದಾನೊಂದು ಕಾಲದಲ್ಲಿ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋಗೆ ಪ್ರವಾಸ ಹೋಗಿದ್ದಾಗಿ ಹೇಳಿಕೆ ನೀಡಿದ್ದು ಎತ್ತಣ ಮಾಮರ, ಎತ್ತಣ ಕೋಗಿಲೆ ಎಂಬಂತಾಗಿದೆ ಎಂದಿದ್ದಾರೆ.

2014ರ ಜೂನ್ ತಿಂಗಳಲ್ಲಿ ಪಕ್ಷದ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಶ್ರೀಲಂಕಾಗೆ ಹೋಗುವುದಾಗಿ ಬಹಿರಂಗವಾಗೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೆ, ಅಲ್ಲಿ ಶಾಸಕರ ಜೊತೆ ನಡೆದ ಮಾತುಕತೆಗಳ ಬಗ್ಗೆ ದೃಶ್ಯಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ. ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಚರ್ಚಿಸಲು ಕೊಲಂಬೋಗೆ ಹೋಗುವುದು ದುಬಾರಿಯಲ್ಲದ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಅದೇ ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿದ್ದಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ
ಚಾಚಿ ಕೊಂಡಿರುವುಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಎಂದು ಪುರಂದರದಾಸರ ಕೀರ್ತನೆಯನ್ನು ಉಲ್ಲೇಖಿಸಿ ಜಮೀರ್ ಅಹ್ಮದ್ ವಿರುದ್ಧ ಜಾಡಿಸಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜೊತೆ ಲಿಂಕ್ ಹೊಂದಿರುವ ಆರೋಪ ಜಮೀರ್ ಅಹ್ಮದ್ ಮೇಲೆ ಕೇಳಿಬರುತ್ತಿದ್ದಂತೆ ಕೊಲಂಬೋಗೆ ಹೋಗಿರುವ ವಿಚಾರದಲ್ಲಿ ಕುಮಾರಸ್ವಾಮಿಯನ್ನು ಎಳೆತರಲು ಪ್ರಯತ್ನ ಮಾಡಿದ್ದರು.
ಆಚಾರವಿಲ್ಲದ ನಾಲಿಗೆ ನಿನ್ನ
— H D Kumaraswamy (@hd_kumaraswamy) September 12, 2020
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಪುರಂದರ ದಾಸರು
6/6
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm