ಬ್ರೇಕಿಂಗ್ ನ್ಯೂಸ್
15-11-21 09:45 pm H.K, Bengaluru Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿಯ ಜೀವಕ್ಕೆ ಆಪತ್ತು ಇದ್ದು ಆತನಿಗೆ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಿಗಳು ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗೆ ಭದ್ರತೆ ಅಗತ್ಯವಾಗಿದೆ. ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಈ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತನ್ನ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು.

ಬಿಟ್ ಕಾಯಿನ್ ಹಗರಣ ಸ್ಫೋಟಗೊಂಡ ನಂತರ ಸಣ್ಣಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದವರು ಹೇಳಿದ್ದಾರೆ.
ಶ್ರೀಕಿ ಈಗಲೂ ಡ್ರಗ್ಸ್ ವ್ಯಸನಿಯೇ ? ಡ್ರಗ್ಸ್ ವ್ಯಸನಿಯಾಗಿದ್ದರೆ ಚಿಕಿತ್ಸೆ ನೀಡಲಾಗಿದೆಯೇ ? ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ ? ಈ ಬಗ್ಗೆ ರಾಜ್ಯದ ಗೃಹ ಸಚಿವರು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿತ ಬಿಳಿ ಕಾಲರ್ ಅಪರಾಧ. ಹ್ಯಾಕ್ ಮಾಡಿರುವುದು, ಸಂಬಂಧಿತ ದಾಖಲೆಗಳ ಪಾಸ್ ವರ್ಡ್ ಇತ್ಯಾದಿ ಆತನ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೀಗಾಗಿ ಶ್ರೀಕಿಯ ಪ್ರಾಣಕ್ಕೆ ಅಪಾಯ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
In a startling demand, Karnataka Leader of the Opposition Siddaramaiah on Monday asked the BJP government to provide security to hacker Srikrishna, suggesting that his life could be in danger.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm