ಬ್ರೇಕಿಂಗ್ ನ್ಯೂಸ್
15-11-21 09:45 pm H.K, Bengaluru Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿಯ ಜೀವಕ್ಕೆ ಆಪತ್ತು ಇದ್ದು ಆತನಿಗೆ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಿಗಳು ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗೆ ಭದ್ರತೆ ಅಗತ್ಯವಾಗಿದೆ. ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಈ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತನ್ನ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು.

ಬಿಟ್ ಕಾಯಿನ್ ಹಗರಣ ಸ್ಫೋಟಗೊಂಡ ನಂತರ ಸಣ್ಣಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದವರು ಹೇಳಿದ್ದಾರೆ.
ಶ್ರೀಕಿ ಈಗಲೂ ಡ್ರಗ್ಸ್ ವ್ಯಸನಿಯೇ ? ಡ್ರಗ್ಸ್ ವ್ಯಸನಿಯಾಗಿದ್ದರೆ ಚಿಕಿತ್ಸೆ ನೀಡಲಾಗಿದೆಯೇ ? ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ ? ಈ ಬಗ್ಗೆ ರಾಜ್ಯದ ಗೃಹ ಸಚಿವರು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿತ ಬಿಳಿ ಕಾಲರ್ ಅಪರಾಧ. ಹ್ಯಾಕ್ ಮಾಡಿರುವುದು, ಸಂಬಂಧಿತ ದಾಖಲೆಗಳ ಪಾಸ್ ವರ್ಡ್ ಇತ್ಯಾದಿ ಆತನ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೀಗಾಗಿ ಶ್ರೀಕಿಯ ಪ್ರಾಣಕ್ಕೆ ಅಪಾಯ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
In a startling demand, Karnataka Leader of the Opposition Siddaramaiah on Monday asked the BJP government to provide security to hacker Srikrishna, suggesting that his life could be in danger.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm