ಬ್ರೇಕಿಂಗ್ ನ್ಯೂಸ್
16-11-21 12:40 pm HK News Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ವಿಚಾರ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷರು ಮೌನವಾಗಿರುವುದನ್ನು ನೋಡಿದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮಾಸ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಹಗರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೆಸರು ಕೇಳಿಬರುತ್ತಿದ್ದರೂ ಈ ಬಗ್ಗೆ ಯಾರು ಕೂಡ ಸ್ಪಷ್ಟನೆ ನೀಡಿಲ್ಲ. ಸ್ವತಃ ರಾಜ್ಯ ಬಿಜೆಪಿ ಅಧ್ಯಕ್ಷರು ಕೂಡ ಯಾವುದೇ ಮಾತನ್ನು ಆಡಿಲ್ಲ. ಇದೇ ವಿಚಾರದಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು. ಇಲ್ಲದಿದ್ದರೆ ಅವರ ನಿಗೂಢ ಮೌನದ ಬಗ್ಗೆ ಜನರು ತಪ್ಪು ತಿಳಿಯಬಹುದು ಎಂದು ಟೀಕಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಕಾಂಗ್ರೆಸ್ ನಾಯಕರು ಬಿಟ್ ಕಾಯಿನ್ ಹಗರಣದ ಬಗ್ಗೆ ಭಾರೀ ಗುಲ್ಲು ಎಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಬಿಜೆಪಿ ಕಾರ್ಯಕರ್ತ ಸಚಿನ್ ಮಾಮನಿ ಎಂಬವರು ಪ್ರಧಾನಿಗೆ ಬರೆದಿರುವ ಪತ್ರವನ್ನು ಆಧರಿಸಿ ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಹೆಸರನ್ನು ಪ್ರಮುಖವಾಗಿ ಎತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಗೆ 70 ಕೋಟಿ ನೀಡಲಾಗಿದೆ ಎನ್ನುವ ವಿಚಾರವನ್ನು ಹೇಳಿಕೊಂಡಿದ್ದರು. ಈ ರೀತಿಯ ಆರೋಪ ಕೇಳಿಬಂದಿದ್ದರೂ, ಬಿಜೆಪಿ ನಾಯಕರು ಆ ಬಗ್ಗೆ ಹಾರಿಕೆಯ ಉತ್ತರ ನೀಡಿದ್ದು ಬಿಟ್ಟರೆ ಯಾವುದೇ ಖಚಿತ ಮಾಹಿತಿಗಳನ್ನು ಬಿಟ್ಟುಕೊಟ್ಟಿಲ್ಲ.
ಇದೇ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ, ಬಿಜೆಪಿ ಅಧ್ಯಕ್ಷರ ಹೆಸರೆತ್ತಿ ನಿಗೂಢ ಮೌನದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಬಿಟ್ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ!
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 15, 2021
ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು ಇಲ್ಲವಾದಲ್ಲಿ ಅವರ 'ನಿಗೂಢ ಮೌನ'ದ ಬಗ್ಗೆ ಜನರು ತಪ್ಪು ತಿಳಿಯಬಹುದು.
BJP Bitcoin scam Priyank Kharge questions the silence of BJP President Nalin Kateel. Now, in another exclusive, one of his main partners in crime, Robin Khandelwal's account of his escapades with Sriki, will be detailed in this story. Furthermore, while going through the charge sheet, we also found how the Nalapad brothers are associated with Sriki.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm