ಬ್ರೇಕಿಂಗ್ ನ್ಯೂಸ್
17-11-21 10:33 pm Hk News Desk ಕರ್ನಾಟಕ
ಬೆಂಗಳೂರು, ನ.17: ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಜೀವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ನಾಯಕರು ಕಳೆದ ಒಂದು ವಾರದಿಂದ ಹೇಳುತ್ತಿದ್ದರೂ ರಾಜ್ಯ ಸರಕಾರ ಕಿವಿಗೆ ಹಾಕ್ಕೊಂಡಿರಲಿಲ್ಲ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಜ್ಯ ಸರಕಾರ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲು ಸೂಚನೆ ನೀಡಿದೆ. ಆದರೆ, ಇತ್ತ ಪೊಲೀಸರು ಭದ್ರತೆ ನೀಡಲು ಹೋದರೆ ಶ್ರೀಕಿಯೇ ಕಾಣೆಯಾಗಿದ್ದಾನೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಬೆಳಗ್ಗೆ ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದರು. ಕೂಡಲೇ ಶ್ರೀಕಿಯ ಮನೆಗೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸರು ತೆರಳಿದ್ದು, ಅಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಶ್ರೀಕಿ ಎಲ್ಲಿದ್ದಾನೆಂದು ಮನೆಯವರಿಗೇ ಗೊತ್ತಿಲ್ಲ. ಹೀಗಾಗಿ ಪೊಲೀಸರು ಶ್ರೀಕಿ ಪತ್ತೆಗಾಗಿ ತೀವ್ರ ತಲೆಕೆಡಿಸಿಕೊಂಡಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಸರಕಾರದ ಬಿಜೆಪಿ ಪ್ರಭಾವಿಗಳು ಇದ್ದಾರೆಂಬ ಮಾಹಿತಿಗಳು ಈಗಾಗ್ಲೇ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ. ಈ ನಡುವೆ, ಆರೋಪಿಯೆಂದು ಗುರುತಿಸಲ್ಪಟ್ಟಿರುವ ಶ್ರೀಕಿಯೇ ನಾಪತ್ತೆಯಾಗಿದ್ದು, ತೀವ್ರ ಸಂಚಲನ ಸೃಷ್ಟಿಸಿದೆ. ಶ್ರೀಕಿ ಬಾಯಿಬಿಟ್ರೆ ದೊಡ್ಡ ನಾಯಕರಿಗೆ ಆಪತ್ತು ಎದುರಾಗುವುದು ಖಚಿತ ಎನ್ನಲಾಗುತ್ತಿರುವ ಮಧ್ಯೆಯೇ ಆತನ ನಾಪತ್ತೆ ಮತ್ತೊಂದು ಶಾಕ್ ನೀಡಿದೆ.
ಈಗಾಗ್ಲೇ ಪ್ರಕರಣದ ಸಾಕ್ಷ್ಯಗಳನ್ನು ಶ್ರೀಕಿ ಪೂರ್ತಿಯಾಗಿ ಕ್ರಾಷ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಮತ್ತೆ ರಿಟ್ರೀವ್ ಮಾಡಿದರೆ ಆಪತ್ತು ಎದುರಾಗುವ ಸಾಧ್ಯತೆಗಳಿವೆ ಎನ್ನುವ ಆತಂಕದಿಂದ ರಾಜಕೀಯ ಪ್ರಭಾವಿಗಳೇ ಸೇರಿ ಆತನನ್ನು ಮುಗಿಸಲು ಸಂಚು ಹೂಡಿದ್ದಾರೆಂಬ ಅನುಮಾನಗಳು ಕಳೆದ ಕೆಲವು ದಿನಗಳಿಂದ ಕೇಳಿಬಂದಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕರು ಪದೇ ಪದೇ ಸರಕಾರವನ್ನು ಎಚ್ಚರಿಸಿದ್ದರು. ಈಗ ಪ್ರಾಣಾಪಾಯದ ಭೀತಿಯಲ್ಲಿ ಸ್ವತಃ ಶ್ರೀಕಿಯೇ ತಲೆಮರೆಸಿಕೊಂಡಿದ್ದಾನೆಯೇ, ಯಾರಾದ್ರೂ ಆತನನ್ನು ಬಚ್ಚಿಟ್ಟಿದ್ದಾರೆಯೇ ಎನ್ನುವ ಅನುಮಾನವೂ ಮೂಡಿದೆ.
Bitcoin scam Hacker Sriki goes missing from house police on search
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm