ಬ್ರೇಕಿಂಗ್ ನ್ಯೂಸ್
24-11-21 12:28 pm HK news Desk ಕರ್ನಾಟಕ
ಬಂಟ್ವಾಳ, ನ.24: ಕಾರಿಂಜೇಶ್ವರ ದೇವಸ್ಥಾನ ಸುತ್ತಮುತ್ತ ನಡೆಯುವ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುತ್ತೇವೆ ಎಂದು ಅಬ್ಬರಿಸಿದ್ದ ಹಿಂದು ಜಾಗರಣ ವೇದಿಕೆ ಮುಖಂಡ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರಿಂಜೇಶ್ವರ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈಗ ಚುನಾವಣೆ ಇದೆ, ಹಾಗೆಂದು ಅಧಿಕಾರಿಗಳು ಬಿಝಿ ಇದ್ದಾರೆ ಅಂದ್ರೆ ಓಕೆ. ಡಿಸೆಂಬರ್ 10 ರ ನಂತರ ಹತ್ತು ದಿನದ ಸಮಯ ಕೊಡುತ್ತೇವೆ. ಆನಂತರವೂ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ನಮ್ಮ ಜಾಗರಣ ವೇದಿಕೆ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆತನ ಕೊರಳು ಪಟ್ಟಿ ಹಿಡಿಯಲಿದ್ದಾರೆ. ಅದೇ ರೀತಿ ಗಣಿಗಾರಿಕೆ ಮುಚ್ಚಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಉಸ್ತುವಾರಿ ಸಚಿವ ಮತ್ತು ಶಾಸಕನೂ ರಾಜಿನಾಮೆ ಕೊಟ್ಟು ಹೋಗಲಿ ಎಂದು ಆಕ್ರೋಶದ ಮಾತುಗಳನ್ನಾಡಿ ಎಚ್ಚರಿಕೆ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳು ಪಟ್ಟಿ ಹಿಡಿಯುತ್ತೇವೆಂದು ಬಹಿರಂಗ ಬೆದರಿಕೆ ಹಾಕಿದ ವಿಚಾರದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಪುಂಜಾಲುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವುದಾಗಿ ಬಹಿರಂಗ ಬೆದರಿಕೆ ಹಾಕಿದ ಆರೋಪದಲ್ಲಿ ಜಗದೀಶ್ ಕಾರಂತ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bantwal Illegal mining surrounding Karneshwar Temple, HJV Jagadish Karanth makes open threat to DC Mangalore. Says we will enter your office and catch hold of your collar in case you don't stop this illegal activity.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm