ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm