ಬ್ರೇಕಿಂಗ್ ನ್ಯೂಸ್
03-12-21 04:53 pm HK Desk news ಕರ್ನಾಟಕ
ಬೆಂಗಳೂರು, ಡಿ.3 : ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮದೇ ಇಲಾಖೆಯ ಆರಕ್ಷಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಭೆ ನಡೆಸಿದ ವೇಳೆ ಗೃಹ ಸಚಿವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಜತೆ ದೂರವಾಣಿ ಮೂಲಕ ಮಾತನಾಡುತ್ತಿದ್ದಾಗ ಈ ರೀತಿ ಬೈದಿದ್ದು ವಿಡಿಯೊದಲ್ಲಿ ದಾಖಲಾಗಿದೆ.
ಇಡೀ ಚಿಕ್ಕಮಗಳೂರು ಜಿಲ್ಲೆ ನಿಮ್ಮದು. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದ್ದೇವೆ. ಯಾರಿಗೂ ಕಡಿಮೆ ಮಾಡಿಲ್ಲ. ಆದ್ರೆ ಇವರಿಗೆಲ್ಲ ಸಂಬಳದಲ್ಲಿ ಬದುಕಬೇಕೆಂದಿಲ್ಲ. ಇಂಥವರೆಲ್ಲ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಸಮವಸ್ತ್ರ ಬಿಚ್ಚಿಟ್ಟು ಎಲ್ಲಾದರೂ ಹೋಗಿ ಸಾಯಲಿ ಅಥವಾ ಮಣ್ಣು ಹೊರಲಿ. ಇವರನ್ನೆಲ್ಲ ನಂಬಿಕೊಂಡು ಜನ ಬದುಕುವುದು ಹೇಗೆ? ಇಲ್ಲಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಬಿಚ್ಚಿ ತೆಗೆದುಕೊಂಡು ಹೋಗುತ್ತಾರೆ. ಎಲ್ಲ ಪೊಲೀಸರು ಹಾಳಾಗಿ ಹೋಗಿದ್ದಾರೆ’ ಎಂದು ಸಚಿವರು ಹೇಳುತ್ತಿದ್ದಾರೆ.
ವಿಡಿಯೋ ವೈರಲ್ ಆದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ‘ಎಲ್ಲ ಪೊಲೀಸರನ್ನು ಉದ್ದೇಶಿಸಿ ಆ ರೀತಿಯ ಹೇಳಿಕೆ ನೀಡಿಲ್ಲ. ಅಕ್ರಮ ಗೋಸಾಗಾಟ ಮಾಡುವವರೊಂದಿಗೆ ಶಾಮೀಲಾದವರನ್ನು ಮಾತ್ರ ಉಲ್ಲೇಖಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
‘ಗೃಹಸಚಿವನಾಗಿ ನಾನು ಪೊಲೀಸರನ್ನು ಗೌರವಿಸುತ್ತೇನೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಮೊನ್ನೆಯಷ್ಟೇ ನನ್ನ ಕ್ಷೇತ್ರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದವರ ಮೇಲೆ ಹಲ್ಲೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕೆಲ ಪೊಲೀಸರನ್ನು ಉಲ್ಲೇಖಿಸಿ ಬೈದಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
Karnataka Home Minister Slams Police officers says they are like dogs eating corrupted money. After a meeting in Chikmagalur Home Minister talking to a higher officer on phone call went viral.
03-03-26 08:37 pm
HK News Staffer
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm