ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm