ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.



ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm