ಬ್ರೇಕಿಂಗ್ ನ್ಯೂಸ್
21-12-21 11:03 pm HK Desk news ಕರ್ನಾಟಕ
ಬೆಳಗಾವಿ, ಡಿ.21 : ಪ್ರತಿಪಕ್ಷಗಳ ಸಭಾತ್ಯಾಗ, ಗದ್ದಲದ ನಡುವೆಯೇ ವಿಧಾನಸಭಾ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಾಗಿದೆ. ಕರ್ನಾಟಕ ಧಾರ್ಮಿಕ ಹಕ್ಕು ರಕ್ಷಣಾ ವಿಧೇಯಕ- 2021 ಅನ್ನು ವಿಪಕ್ಷ ವಿರೋಧದ ನಡುವೆಯೇ ಬಿಜೆಪಿ ಸರಕಾರ ಅಧಿವೇಶನದಲ್ಲಿ ಮಂಡಿಸಿದ್ದು ಬುಧವಾರ ಚರ್ಚೆಗೆ ಬರಲಿದೆ.
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕವನ್ನು ತರಾತುರಿಯಲ್ಲಿ ಮಂಡಿಸಿದ್ದು, ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ಷೇಪ ಎತ್ತಿದ್ದಾರೆ. ಅಜೆಂಡಾದಲ್ಲಿ ಇಲ್ಲದ ವಿಚಾರವನ್ನು ಹೇಗೆ ಮಂಡನೆ ಮಾಡಿದ್ರಿ. ಇದು ಆರ್ಟಿಕಲ್ 25ರ ಪ್ರಕಾರ ಕಾನೂನು ಉಲ್ಲಂಘನೆ ಎಂದು ಹರಿಹಾಯ್ದಿದ್ದಾರೆ.
ಹೊಸ ಕಾಯ್ದೆ ಪ್ರಕಾರ, ಬಲವಂತ, ಆಮಿಷ, ಇನ್ನಿತರ ತಪ್ಪಾದ ಉದ್ದೇಶಗಳಿಂದ ಯಾವುದೇ ವ್ಯಕ್ತಿಯನ್ನು ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವುದನ್ನು ವಿರೋಧಿಸುತ್ತದೆ. ಈಗಾಗ್ಲೇ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಜಾರಿಗೆ ತಂದಿರುವ ಇದೇ ರೀತಿಯ ಕಾನೂನಿಗಿಂತ ಕರ್ನಾಟಕದ ಮಸೂದೆ ಹೆಚ್ಚು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಈ ಕಾಯ್ದೆಯದಲ್ಲಿ ಕನಿಷಅಠ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಲು ಅವಕಾಶ ನೀಡಲಾಗಿದೆ. ಈ ರೀತಿಯ ಮತಾಂತರ ಆದಲ್ಲಿ ಸಂಬಂಧಿತ ವ್ಯಕ್ತಿಯ ಹೆತ್ತವರು, ಸೋದರ- ಸೋದರಿ ಹೀಗೆ ರಕ್ತ ಸಂಬಂಧ ಹೊಂದಿರುವ ಯಾರು ಕೂಡ ದೂರು ನೀಡಲು ಸಾಧ್ಯವಿದ್ದು, ಪೊಲೀಸರು ಎಫ್ಐಆರ್ ದಾಖಲಿಸಬೇಕಾಗುತ್ತದೆ.
ಹೊಸ ಕಾಯ್ದೆಯನ್ನು ಸೋಮವಾರ ಸಚಿವ ಸಂಪುಟದಲ್ಲಿ ಚರ್ಚಿಸಿ, ಪಾಸ್ ಮಾಡಲಾಗಿತ್ತು. ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಈಗಾಗ್ಲೇ ಕಾಂಗ್ರೆಸ್ ಹೇಳಿದ್ದು, ಬುಧವಾರ ತೀವ್ರ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆಯಿದೆ.
The Karnataka government on Tuesday tabled the controversial Karnataka Protection of Right to Freedom of Religion Bill, 2021 popularly known as Anti-Conversion bill in the assembly in Suvarna Vidhan Soudha at Belagavi. The discussion on the proposed bill will take place on Wednesday.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm