ಬ್ರೇಕಿಂಗ್ ನ್ಯೂಸ್
23-12-21 02:55 pm HK Desk news ಕರ್ನಾಟಕ
ಬೆಂಗಳೂರು, ಡಿ.23 : ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ನಡೆಸುವ ಆರೋಪದ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಣಪತಿ ಕಟ್ಟೆ ರಸ್ತೆಯ ಎಸ್ತೆಲಾ ಲೂಯಿಸ್ ಎಂಬವರು ತಮ್ಮ ಮನೆಯಲ್ಲಿ ಹಮ್ಮಿಕೊಂಡಿರುವ ಕ್ರಿಸ್ಮಸ್ ಪ್ರಾರ್ಥನೆಗೆ ಹೈಕೋರ್ಟ್ ಮೆಟ್ಟಿಲೇರಿ ಅನುಮತಿ ಪಡೆದಿದ್ದಾರೆ.
ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಎಸ್ತೆಲಾ ಅವರಿಗೆ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು ಷರತ್ತು ಬದ್ಧ ಅನುಮತಿ ನೀಡಿದೆ.
ವಿಚಾರಣೆ ವೇಳೆ, ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸರ್ಕಾರಿ ವಕೀಲ ವಿನೋದ್ ಕುಮಾರ್, ‘ಅರ್ಜಿದಾರರು ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣಕ್ಕಾಗಿಯೇ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ದರಿಂದ, ಅರ್ಜಿದಾರರ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆಗೆ ಅನುಮತಿ ನೀಡಬಾರದು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರ ಪರ ವಕೀಲರು, ‘ಎಸ್ತೆಲಾ ಮನೆಯಲ್ಲಿ ಕ್ರಿಸ್ಮಸ್ ಪಾರ್ಥನೆ ವೇಳೆ ಮತಾಂತರ ಚಟುವಟಿಕೆ ನಡೆಯುವುದಿಲ್ಲ. ಈ ಬಗ್ಗೆ ಯಾರು ಕೂಡ ಸಂಶಯ ಪಡುವುದು ಬೇಡ. ಅಲ್ಲಿ ಕೇವಲ ಕ್ರಿಸ್ಮಸ್ ಪ್ರಾರ್ಥನೆ ಅಷ್ಟೇ ನಡೆಯಲಿದೆ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ಮಾಡಬಹುದು. ಈ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ತೊಂದರೆ ಉಂಟು ಮಾಡಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಬಾರದು’ ಎಂದು ಷರತ್ತು ವಿಧಿಸಿ ಅನುಮತಿ ನೀಡಿತು. ‘ಪ್ರಾರ್ಥನೆ ಸಂದರ್ಭದಲ್ಲಿ ಪೊಲೀಸರು ಮನೆಯ ಮೇಲೆ ನಿಗಾ ವಹಿಸವುದಕ್ಕೂ ಅವಕಾಶ ಇದೆ’ ಎಂದೂ ನ್ಯಾಯಪೀಠ ಹೇಳಿದೆ.
Kundapura Alleged of Coversion in the name of Christmas Prayer, woman gets order to conduct prayers at home from High court.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm