ಬ್ರೇಕಿಂಗ್ ನ್ಯೂಸ್
28-12-21 01:48 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ.28 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಡಿ.28 ಮತ್ತು 29ರಂದು ನಡೆಯುವ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅರುಣ್ ಸಿಂಗ್, ಸಿಎಂ ಬೊಮ್ಮಾಯಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೊಮ್ಮಾಯಿ ಅವರು ನಿರೀಕ್ಷೆ ಮೀರಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಬದ್ಧತೆ ಇರುವ ಮತ್ತು ಪ್ರಾಮಾಣಿಕ ಮುಖ್ಯಮಂತ್ರಿ. ಅವರನ್ನು ಬದಲಾವಣೆ ಮಾಡುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು ಸ್ವಇಚ್ಛೆಯಿಂದಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದರು ಎಂದು ಪ್ರಶ್ನೆಯೊಂದಕ್ಕೆ ಅರುಣ್ ಸಿಂಗ್ ಉತ್ತರಿಸಿದರು. ಗುತ್ತಿಗೆದಾರರು ಮಾಡಿರುವ 40 ಶೇ. ಕಮಿಷನ್ ಆರೋಪದಲ್ಲಿ ಹುರುಳಿಲ್ಲ. ಸರಕಾರ ಪ್ರಾಮಾಣಿಕವಾಗಿದ್ದು ಕೆಲವೊಂದು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರಬಹುದು. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬೆಳಗಾವಿಯಲ್ಲಿ ಸೋಲಲು ಕಾರಣವಾದ ಅಂಶಗಳ ಬಗ್ಗೆ ಪರಿಶೀಲನೆಗೆ ಸಮಿತಿ ರಚಿಸಲಾಗುವುದು. ಅದಕ್ಕೆ ಪೂರಕವಾಗಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಹೇಳಿದರು. ಬೊಮ್ಮಾಯಿ ಅವರಿಗೆ ಕೇಂದ್ರ ಸಚಿವರಾಗುವ ಯೋಗವಿದೆ ಎಂಬ ಸಚಿವ ನಿರಾಣಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ಈ ಬಗ್ಗೆ ಅವರಲ್ಲೇ ಮಾಹಿತಿ ಕೇಳಿದ್ದೇನೆ. ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ನಿರಾಣಿ ಸ್ಪಷ್ಟಪಡಿಸಿದ್ದಾಗಿ ಹೇಳಿದರು.
Ahead of the Karnataka BJP executive committee meeting on Tuesday in Hubballi, Arun Singh, BJP national general secretary and in charge BJP Karnataka, has ruled out a change in leadership in the State.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm