ಬ್ರೇಕಿಂಗ್ ನ್ಯೂಸ್
28-12-21 02:32 pm HK Desk news ಕರ್ನಾಟಕ
ಬೆಂಗಳೂರು, ಡಿ.28 : ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ವರ್ಷದ ಜನವರಿ 1ರಿಂದ ಫೆಬ್ರವರಿ 7ರ ವರೆಗೆ ಪ್ರತಿದಿನವೂ ಸೂರ್ಯ ನಮಸ್ಕಾರ ನಡೆಸುವಂತೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ಪಿಯು ಮಕ್ಕಳಲ್ಲಿ ಯೋಗಾಸನದ ಬಗ್ಗೆ ಆಸಕ್ತಿ ಹುಟ್ಟಿಸುವ ಭಾಗವಾಗಿ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಯೋಜಿಸಲು ಸೂಚನೆ ನೀಡಲಾಗಿದೆ. ದೇಶದ ಎಲ್ಲ 30 ರಾಜ್ಯಗಳ ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಈ ಬಗ್ಗೆ ಕೇಂದ್ರ ಸರಕಾರವು ಡಿ.16ರಂದು ಸುತ್ತೋಲೆ ಹೊರಡಿಸಿತ್ತು.
ಜನವರಿ ಒಂದರಿಂದಲೇ ಸೂರ್ಯ ನಮಸ್ಕಾರ ನಡೆಸಬೇಕಾಗಿದ್ದು, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ. ಜ.1ರಿಂದ ಫೆ.7ರ ನಡುವೆ 38 ದಿನಗಳಿದ್ದು, 21 ಶಾಲಾ ದಿನಗಳಲ್ಲಿ ಬೆಳಗ್ಗೆ ಸೂರ್ಯ ನಮಸ್ಕಾರ ಮಾಡಿದರೆ 21 ದಿನಗಳ ಪರ್ಯಂತ ಯೋಗ ನಡೆಸಿದಂತಾಗುತ್ತದೆ. ಪ್ರತಿ ದಿನ 13 ಸೂರ್ಯ ನಮಸ್ಕಾರ ಮಾಡಬೇಕಿದ್ದು, ಇದರಂತೆ 21 ದಿವಸಗಳಲ್ಲಿ 273 ಬಾರಿ ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಇದನ್ನು ಪೂರ್ತಿಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಯೋಗ ಫೆಡರೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಇ-ಸರ್ಟಿಫಿಕೇಟ್ ನೀಡಲಾಗುತ್ತದೆ.
ಪ್ರತಿ ಕಾಲೇಜುಗಳಲ್ಲಿ ಕೈಗೊಂಡ ಕ್ರಮಗಳು, ಆಯಾ ದಿನದಲ್ಲಿ ಭಾಗವಹಿಸಿದ ಚಟುವಟಿಕೆ ಬಗ್ಗೆ ಆಯಾ ಜಿಲ್ಲೆಯ ಶಿಕ್ಣ ಇಲಾಖೆ ಉಪ ನಿರ್ದೇಶಕರಿಗೆ ಸಲ್ಲಿಸಬೇಕಾಗುತ್ತದೆ. ಸೂರ್ಯ ನಮಸ್ಕಾರವು ವಿದ್ಯಾರ್ಥಿಗಳ ಆರೋಗ್ಯ ಮತ್ತು ಮನೋಬಲ ವೃದ್ಧಿಗೆ ಸಹಾಯಕ. ಅದಕ್ಕಾಗಿ ಸೂಕ್ತ ಗುರುವನ್ನು ನೇಮಿಸಿಕೊಂಡು ಯೋಗಾಭ್ಯಾಸ ನಡೆಸುವಂತೆ ಕೇಂದ್ರ ಶಿಕ್ಷಣ ಇಲಾಖೆಯ ಅದೇಶ ತಿಳಿಸಿದೆ.
Pre-university Education department of the state has asked all PU colleges to hold Surya Namaskar programme from January 1 to February 7. In addition, on January 26, it has asked the school authorities to get the same done with music.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm