ಬ್ರೇಕಿಂಗ್ ನ್ಯೂಸ್
28-12-21 10:12 pm HK Desk news ಕರ್ನಾಟಕ
ಮಂಡ್ಯ, ಡಿ.28 : ಮತಾಂತರ ನಿಷೇಧ ಕಾಯ್ದೆ ಆರೆಸ್ಸೆಸ್ ಅಜೆಂಡಾ. ಕಾಯ್ದೆಯ ಕರಡನ್ನು ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಲಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈಗ ಆರೆಸ್ಸೆಸ್ ಹೇಳಿದಂತೆ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಜಾರಲು ಹೊರಟಿದೆ. ಇದೇ ಕರಡನ್ನು ನಾನು ಅಧಿಕಾರದಲ್ಲಿದ್ದಾಗ ರೆಡಿ ಮಾಡಿದ್ದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹೌದು.. ಆ ಮಸೂದೆಯ ಕರಡನ್ನು ನನ್ನ ಮುಂದೆ ಇಟ್ಟಿದ್ದರು. ಅದನ್ನು ಬರೆದಿದ್ದ ಎಲ್ಲರೂ ಆರೆಸ್ಸೆಸ್ ನವರಾಗಿದ್ದರು. ನಾನು ಆಗ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಆಂಜನೇಯರಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ. ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಸೂಚಿಸಿ ಬರೆದಿದ್ದರು.

ಮತಾಂತರ ನಿಷೇಧ ಮಸೂದೆಯ ಕರಡು ತಂದಿದ್ದು 2011ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ. ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದ್ದೆ. ಯಡಿಯೂರಪ್ಪ ಕೂಡ ಅದನ್ನ ಒಪ್ಪಿಕೊಂಡಿದ್ದರು ಎಂದು ಹೇಳಿದರು ಸಿದ್ದರಾಮಯ್ಯ.
ಈಶ್ವರಪ್ಪ ಒಬ್ಬ ಪೆದ್ದ...!
ಈ ಮಸೂದೆಯನ್ನು ಆರೆಸ್ಸೆಸ್ ನವರು ಮಾಡಿರೋದು ಅಂತ ಸದನದಲ್ಲಿ ಹೇಳಿದ್ದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಆದರೆ ಈಶ್ವರಪ್ಪ ಒಬ್ಬ ಪೆದ್ದ. ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾನೆ ಎಂದು ಸಿದ್ದು ಟೀಕಿಸಿದರು.

ಸಂವಿಧಾನದಲ್ಲೇ ಯಾವುದೇ ಮತ, ಧರ್ಮ ಸ್ವೀಕಾರಕ್ಕೆ ಮುಕ್ತ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಇವನ್ಯಾರು? ಯಾರು ಯಾರನ್ನೇ ಮದುವೆ ಆದ್ರೂ ಪ್ರಶ್ನೆ ಮಾಡುವಂತೆ ಇಲ್ಲ. ಆದರೆ ಈ ಕಾನೂನು ಮೂಲಕ ಪ್ರೀತಿಸಿ ಮದುವೆಯಾಗೋದಕ್ಕೂ ಅವಕಾಶ ಇಲ್ಲದಾಗಿದೆ. ಇವರು ಜನವಿರೋಧಿ ಕಾನೂನು ತಂದಿದ್ದಾರೆ. ಬಿಜೆಪಿಯವರದ್ದು ಜನ ವಿರೋಧಿ ಆರೆಸ್ಸೆಸ್ ಸಿದ್ಧಾಂತ. ಕಾಂಗ್ರೆಸ್ ಪಕ್ಷದ್ದು ಜನಪರ ಸಿದ್ಧಾಂತ. ನಾವು ಜನಪರ ಇರುವವರು. ಬಿಜೆಪಿಯವರು ಜನರನ್ನ ಬೇರ್ಪಡಿಸುವವರು ಎಂದು ಸಿದ್ದರಾಮಯ್ಯ ಟೀಕಿಸಿದರು.
The Congress will repeal the proposed contentious anti-conversion legislations immediately after coming to power following the 2023 Assembly polls in Karnataka, Leader of Opposition Siddaramaiah said on Monday.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm