ಬ್ರೇಕಿಂಗ್ ನ್ಯೂಸ್
01-01-22 08:08 pm HK Desk news ಕರ್ನಾಟಕ
ಬೆಂಗಳೂರು, ಜ 01: ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ. ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು ಡಾ. ರಾಜ್ ಕುಮಾರ್ ಕೂಡ ಸಾಮಾಜಿಕ ಕಳಕಳಿಯನ್ನ ಹೊಂದಿದ್ದ ಮೇರು ನಟನಾಗಿದ್ದರು. ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗಬಾರದು ಎಂಬ ಮಾತಿಗೆ ತಕ್ಕಂತೆ ನಡೆದುಕೊಂಡವರು ಅಣ್ಣಾವ್ರು. ಅಂದು ನಂದಿನಿ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ಕುಮಾರ್,
ಯಾವುದೇ ಸಂಭಾವನೆ ತೆಗೆದುಕೊಳ್ಳದೆ ರೈತರ ಪರ ನಿಂತಿದ್ದರು. ತಂದೆಯ ಆದರ್ಶಗಳನ್ನ ಪಾಲಿಸಿಕೊಂಡ ಪುನೀತ್ ರಾಜ್ಕುಮಾರ್ ಕೂಡ ಒಂದು ರೂಪಾಯಿ ಸಂಭಾವನೆ ಪಡೆಯದೆ ಕೆಎಂಎಫ್ ನಂದಿನಿ ಹಾಲಿನ ರಾಯಭಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಿ ವಿಶೇಷ ಗೌರವ ಸೂಚಿಸಲಾಗಿದೆ. ವರ್ಷದ ಕೊನೆಯ ದಿನವಾದ ಇಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರವನ್ನ ಮುದ್ರಿಸಿದ್ದಾರೆ. ಹೀಗಾಗಿ, ಕೋಟ್ಯಂತರ ಅಭಿಮಾನಿಗಳಿಗೆ ಸಂತೋಷವಾಗಿದೆ.
The KMF (KMF) has also paid a wide tribute to Appu. Fans (Fans) are emotional when they see this. Appu Nandini had acted in an ad without getting any money. He was a brand ambassador (Brand Ambassador). Accordingly, a special tribute has now been paid to him by kmf.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm