ಬ್ರೇಕಿಂಗ್ ನ್ಯೂಸ್
08-01-22 08:42 pm HK Desk news ಕರ್ನಾಟಕ
ರಾಮನಗರ, ಜ.8 : ಸರಕಾರ ನಮ್ಮನ್ನು ಜೈಲಿಗೆ ಹಾಕಿದರೂ ಮೇಕೆದಾಟು ವಿಚಾರದಲ್ಲಿ ಹಮ್ಮಿಕೊಂಡ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುಡುಗಿದ್ದಾರೆ.
ಕನಕಪುರದ ಡಿಕೆ ಶಿವಕುಮಾರ್ ಮನೆಯಲ್ಲಿ ಶಾಸಕಾಂಗ ಸಭೆ ನಡೆಸಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಮುಂಚೂಣಿ ನಾಯಕರು ಪಾಲ್ಗೊಂಡಿದ್ದಾರೆ. ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಯಾವುದೇ ಕಾರಣಕ್ಕೂ ಪಾದಯಾತ್ರೆ ಹಿಂಪಡೆಯುವುದಿಲ್ಲ. ಸರಕಾರ ಈಗಾಗಲೇ ನಮಗೆ ನೋಟೀಸ್ ನೀಡಿದೆ. ಜಿಲ್ಲೆಯ ಅಧಿಕಾರಿಗಳು ಸರಕಾರದ ಅಣತಿಯಂತೆ ನಡೆಯುತ್ತಿದ್ದಾರೆ. ನನ್ನನ್ನು ಬಂಧಿಸಿ, ಶರ್ಟ್ ಪ್ಯಾಂಟ್ ಬಿಚ್ಚಿಸಿ ಜೈಲಿಗೆ ಹಾಕಿದರೂ ಪರವಾಗಿಲ್ಲ. ನಾವು ಪಾದಯಾತ್ರೆ ಮಾಡೇ ಮಾಡುತ್ತೀವಿ ಎಂದು ಹೇಳಿದ್ದಾರೆ. ಕೋವಿಡ್ ಇದೆಯೆಂದು ಕರ್ಫ್ಯೂ ಹಾಕಿದ್ದಾರೆ. ಕೊರೊನಾದಿಂದಾಗಿ ರಾಜ್ಯದ ಎಲ್ಲೇ ಆಗಲಿ, ಯಾರಾದ್ರೂ ಐಸಿಯುನಲ್ಲಿ ಮಲಗಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸರಕಾರದವರು ರಾಮನಗರ ವ್ಯಾಪ್ತಿಗೆ ನಿಷೇಧಾಜ್ಞೆ ಹಾಕಿದ್ದಾರೆ. ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕಬೇಕು ಎನ್ನುವ ಉದ್ದೇಶದಿಂದಲೇ ಈ ರೀತಿ ವರ್ತಿಸಿದ್ದಾರೆ. ಗುಂಪಾಗಿ ಪಾದಯಾತ್ರೆ ಮಾಡಬಾರದು ಅಂದರೆ ನಾವು ನಾಲ್ಕು ನಾಲ್ಕು ಜನರಷ್ಟೇ ಹೋಗುತ್ತೇವೆ. ನಾವು ನಡೆದುಕೊಂಡು ಹೋಗಬಾರದು ಅಂದ್ರೆ ಅದನ್ನು ಒಪ್ಪುವುದು ಹೇಗೆ.. ಕಾವೇರಿ ನೀರು ನಮ್ಮ ಹಕ್ಕು. ಅದನ್ನು ಈಡೇರಿಸಿಕೊಳ್ಳಲು ನಾವು ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ರಾಮನಗರ ಎಸ್ಪಿ ಗಿರೀಶ್, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆಗೆ ರಹಸ್ಯವಾಗಿ ಮಾತುಕತೆ ನಡೆಸಿದರು. ಇದರ ಬಳಿಕ ಮಾತನಾಡಿದ ಎಸ್ಪಿ ಗಿರೀಶ್, ತಾಲೂಕು ಆಡಳಿತ ಈಗಾಗಲೇ ನೋಟೀಸನ್ನು ನೀಡಿದೆ. ಪಾದಯಾತ್ರೆ ಮಾಡಬಾರದು ಎಂದು ಮನವಿ ಮಾಡಿದ್ದೇವೆ. ಸರಕಾರದ ಸೂಚನೆ ಪಾಲಿಸದೇ ಇದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಿಸಬೇಕೆಂದು ಜನವರಿ 9ರಿಂದ ಪಾದಯಾತ್ರೆ ನಡೆಸುವುದಾಗಿ ಕಾಂಗ್ರೆಸ್ ಡಿಸೆಂಬರ್ ಕೊನೆಯಲ್ಲಿ ಘೋಷಣೆ ಮಾಡಿತ್ತು. ಆದರೆ ರಾಜ್ಯ ಸರಕಾರ ಕೋವಿಡ್ ನೆಪದಲ್ಲಿ ರಾತ್ರಿ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಧಿಸಿ ಪಾದಯಾತ್ರೆ ನಡೆಸದಂತೆ ನಿಯಂತ್ರಣ ಹೇರುವ ಯತ್ನ ಮಾಡಿದೆ.
The Congress will hold a rally (Congress Mekedatu Padayatra) from tomorrow (Jan 9) demanding implementation of the Mekedatu Yojana (Mekedatu Project) and has already made all preparations. However, Ramanagara Superintendent of Police Girish has issued a khadak warning to KPC president DK Sivakumar.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm