ಬ್ರೇಕಿಂಗ್ ನ್ಯೂಸ್
09-01-22 08:51 pm HK Desk news ಕರ್ನಾಟಕ
ಬೆಂಗಳೂರು, ಜ.9 : ವಿದ್ಯಾರ್ಥಿಗಳಿಂದ ಶುಲ್ಕದ ರೂಪದಲ್ಲಿ ಸಂಗ್ರಹಿಸಿದ್ದ 107 ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪದಲ್ಲಿ ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯ ಮಾಜಿ ಕುಲಪತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಕುಲಪತಿ ಮಧುಕರ್ ಜಿ. ಅಂಗೂರ್ ಬಂಧಿತ ಆರೋಪಿ. ಇವರನ್ನು ಶನಿವಾರ ಅಧಿಕಾರಿಗಳು ಬಂಧಿಸಿದ್ದು ಭಾನುವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಧುಕರ್ ಜಿ. ಅಂಗೂರ್ ಸೇರಿದಂತೆ ಅವರ ಕುಟುಂಬದ ನಾಲ್ವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿತ್ತು. ಅಂಗೂರ್ ಕುಲಪತಿಯಾಗಿದ್ದಾಗ 2016-17ರಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶುಲ್ಕವನ್ನು ವಿಶ್ವವಿದ್ಯಾನಿಲಯದ ಖಾತೆಯ ಬದಲಿಗೆ ಶ್ರೀವಾರಿ ಎಜುಕೇಶನಲ್ ಸರ್ವಿಸಸ್ ಹೆಸರಿನಲ್ಲಿದ್ದ ಟ್ರಸ್ಟಿಗೆ ಹಾಕುವಂತೆ ಸೂಚಿಸಲಾಗಿತ್ತು. ಇದರಂತೆ, 4500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಹಣವನ್ನು ತುಂಬಿದ್ದರು. ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ ಇತ್ಯಾದಿ ಹೆಸರಲ್ಲಿ ವಿದ್ಯಾರ್ಥಿಗಳು ಹಣ ಜಮೆ ಮಾಡಿದ್ದರು.
ಈ ಬಗ್ಗೆ ಅಲಯನ್ಸ್ ವಿವಿಯಿಂದ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಳೆದ ಸೆಪ್ಟಂಬರ್ ತಿಂಗಳಲ್ಲಿ ಮಧುಕರ್ ಜಿ. ಅಂಗುರ್, ಕುಟುಂಬ ಸದಸ್ಯರಾದ ಪ್ರಿಯಾಂಕ ಅಂಗೂರ್, ರವಿಕುಮಾರ್, ಶ್ರುತಿ, ಪಾವನಾ ದಿಬ್ಬೂರ್ ಹೆಸರಿನಲ್ಲಿದ್ದ 19 ಕೋಟಿ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು. ಬೆಂಗಳೂರು ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ನಾಲ್ಕು ಎಫ್ಐಆರ್ ದಾಖಲಿಸಿತ್ತು. ಆನಂತರ ಜಾರಿ ನಿರ್ದೇಶನಾಲಯವು ತನಿಖೆ ಕೈಗೆತ್ತಿಕೊಂಡಿದ್ದು ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.
The ED initiated an investigation based on four FIRs registered against Angur, Priyanka BS and Ravi Kumar. Amounts to the tune of Rs 107 crore was allegedly swindled by the accused in the name of tuition fees, hostel fees and so on.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm