ಬ್ರೇಕಿಂಗ್ ನ್ಯೂಸ್
12-01-22 10:48 pm HK Desk news ಕರ್ನಾಟಕ
ಬೆಂಗಳೂರು, ಜ.12 : ಕೊರೊನಾ ಹರಡದಂತೆ ನಿರ್ಬಂಧ ವಿಧಿಸಿರುವಾಗ ಕಾಂಗ್ರೆಸ್ ಪಾದಯಾತ್ರೆ ನಡೆಸುವುದು ಹೇಗೆ.. ಇದಕ್ಕೆ ರಾಜ್ಯ ಸರಕಾರ ಅವಕಾಶ ನೀಡಿದ್ದು ಹೇಗೆ.. ಪಾದಯಾತ್ರೆ ತಡೆಯೋಕೆ ರಾಜ್ಯ ಸರಕಾರಕ್ಕೆ ಸಾಮರ್ಥ್ಯ ಇಲ್ಲವೇ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರ ಕಾಂಗ್ರೆಸ್ ನಾಯಕರ ಮೇಕೆದಾಟು ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ತಡೆಯಲು ಮುಂದಾಗಿದೆ.
ಈ ಬಗ್ಗೆ ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಪಾದಯಾತ್ರೆಗೆ ಆಗಮಿಸುವ ಜನ, ವಾಹನಗಳನ್ನು ತಡೆಯುವಂತೆ ಆದೇಶ ಮಾಡಿದ್ದಾರೆ. ಹೀಗಾಗಿ ರಾಮನಗರದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಆಡಳಿತಾಂಗದ ಸದಸ್ಯರು ತುರ್ತು ಸಭೆ ನಡೆಸಿ ಚರ್ಚಿಸಿದ್ದಾರೆ. ಗುರುವಾರ ಬೆಳಗ್ಗೆ ಪಾದಯಾತ್ರೆಗೆ ಬ್ರೇಕ್ ಹಾಕಲು ಅಧಿಕಾರಿಗಳು ಚಿಂತನೆ ನಡೆಸಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾತ್ರೆಗೆ ಸಂಬಂಧಿಸಿ ಆಗಮಿಸುವ ವಾಹನ ಮತ್ತು ಜನರನ್ನು ತಡೆಯುವಂತೆ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಈ ನಡುವೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದ ಮೇಕೆದಾಟು ಪಾದಯಾತ್ರೆ ಬುಧವಾರ ನಾಲ್ಕನೇ ದಿನ ಪೂರೈಸಿದ್ದು, ರಾಮನಗರ ತಲುಪಿದೆ. ಗುರುವಾರ 5ನೇ ದಿನದ ಪಾದಯಾತ್ರೆ ರಾಮನಗರದಿಂದ ಬಿಡದಿಗೆ ತೆರಳಲಿದೆ. ಇದಲ್ಲದೆ, ಹೈಕೋರ್ಟ್ ಚಾಟಿಗೂ ಕ್ಯಾರೆನ್ನದ ಡಿಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಬುಧವಾರ ಸಂಜೆ ರಾಮನಗರ ತಲುಪುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಉತ್ಸಾಹದಲ್ಲಿದ್ದು, ರಾತ್ರಿ ಸಿಡಿಮದ್ದು ಸಿಡಿಸಿ ಪಾದಯಾತ್ರೆಯನ್ನು ಸ್ವಾಗತಿಸಿದ್ದಾರೆ. ಈ ವೇಳೆ, ಪಾದಯಾತ್ರೆ ಮಾಡೇ ಮಾಡುತ್ತೇವೆ. ಬೆಂಗಳೂರು ತಲುಪಲಿದ್ದೇವೆ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ಡಿಕೆಶಿ ಕರೆ ನೀಡಿದ್ದಾರೆ.
ಹೈಕೋರ್ಟ್ ಚಾಟಿ ಬೆನ್ನಲ್ಲೇ ರಾಜ್ಯ ಸರಕಾರ ವಿಪತ್ತು ನಿರ್ವಹಣೆ ಕಾಯ್ದೆಯಡಿ ಆದೇಶ ಮಾಡಿದ್ದು, ಪಾದಯಾತ್ರೆ ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಹೀಗಾಗಿ ರಾಮನಗರದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ, ಐಜಿಪಿ, ಎಡಿಜಿಪಿ ಸ್ಥಳಕ್ಕೆ ರಾಮನಗರಕ್ಕೆ ತೆರಳಿದ್ದಾರೆ. ಇದರಿಂದಾಗಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆಯುವ ಸಾಧ್ಯತೆಯಿದೆ. ಜನರು ಸ್ಥಳಕ್ಕೆ ಬರದಂತೆ ತಡೆಯುವ ಉದ್ದೇಶದಿಂದ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರಾತ್ರಿಯೇ ಈ ಬಗ್ಗೆ ಬಂದೋಬಸ್ತ್ ಮಾಡಲಾಗಿದ್ದು, ಯಾತ್ರೆ ಬೆಂಗಳೂರು ಪ್ರವೇಶ ಮಾಡದಂತೆ ತಡೆಯಲು ತಯಾರಿ ನಡೆಸಲಾಗಿದೆ.
The Karnataka High Court on Wednesday took the State Government to task for allowing the Congress party to continue with its 10-day long padayatra to demand a new dam over the river Cauvery even as the Covid-19 cases are multiplying by the day. The Court was equally displeased with the Congress party's actions in going ahead with its march amid the rapid spread in infections despite the State’s Covid-19 guidelines banning all such gatherings.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am