ಬ್ರೇಕಿಂಗ್ ನ್ಯೂಸ್
14-01-22 10:50 pm HK Desk news ಕರ್ನಾಟಕ
ಬೆಂಗಳೂರು, ಜ.14 : ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಗದೀಶ್ ವಿ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ.ಚನ್ನಣ್ಣನವರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ, ಪೊಲೀಸ್ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ.ಚನ್ನಣ್ಣನವರ್ ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೂಡ ಪೊಲೀಸ್ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿದ್ದಾರೆ.
CID SP Ravi D Channannavar and 3 other police officers alleged for taking bribe of 50 lakhs from accused. A complaint has been given to the police chief of Karnataka.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm