ಬ್ರೇಕಿಂಗ್ ನ್ಯೂಸ್
15-01-22 10:26 pm HK Desk news ಕರ್ನಾಟಕ
ಬೆಂಗಳೂರು, ಜ.15 : ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲಿಗೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮತ್ತೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಹೋಗಿದೆ. ಇತ್ತೀಚೆಗೆ ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿತ್ತು. ಆದರೆ ದರ ಹೆಚ್ಚಳದ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಅನುಮತಿ ನೀಡಿರಲಿಲ್ಲ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ನಂದಿನಿ ಹಾಲಿನ ದರ ಇಡೀ ದೇಶದಲ್ಲಿ ಅತ್ಯಂತ ಕನಿಷ್ಠವಾಗಿದೆ. ಹೀಗಾಗಿ ದರ ಹೆಚ್ಚಿಸಬೇಕೆಂದು ಹಾಲು ಉತ್ಪಾದಕರ ಸಂಘಗಳು ಒಕ್ಕೂಟಕ್ಕೆ ಮನವಿ ಮಾಡಿದ್ದವು. ದರ ಹೆಚ್ಚಿಸುವ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.


ದೇಶದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಿಸುವ ಸಲುವಾಗಿ ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸಲು ನಿರ್ಧರಿಸಲಾಗಿದೆ. ನಂದಿನಿ ಚೀಸ್, ಪನೀರ್ ಆಧರಿತ ಉತ್ಪನ್ನಗಳು ದೇಶಾದ್ಯಂತ ರವಾನೆಯಾಗುತ್ತಿದ್ದು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ನಂದಿನಿ ಉತ್ಪನ್ನಗಳು ಇನ್ನಷ್ಟು ಹೆಚ್ಚು ಮಾರುಕಟ್ಟೆ ಸಾಧಿಸಲು ಮೆಗಾ ಫುಡ್ ಪಾರ್ಕ್ ಮಾಡಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿಯೂ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಸಲು ಯೋಜನೆ ಹಾಕಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
The Karnataka Milk Federation (KMF) has sought a Rs 3 hike per litre of milk in the state and appealed to CM Basavaraj Bommai to approve the fresh tariff.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm