ಬ್ರೇಕಿಂಗ್ ನ್ಯೂಸ್
16-09-20 11:02 pm Headline Karnataka News Network ಕರ್ನಾಟಕ
ಕಲಬುರಗಿ, ಸೆಪ್ಟಂಬರ್ 16: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ನದಿ ನಾಲೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ಮಳೆ ಹಾನಿ ಪರಿಶೀಲನೆಗೆ ತೆರಳಿದ್ದ ತಹಶೀಲ್ದಾರ್ ಒಬ್ಬರು ಅಪಾಯದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಸೇತುವೆ ಮೇಲೆ ಹರಿಯುತ್ತಿದ್ದ ನದಿ ನೀರಿನಲ್ಲಿ ಕಾರು ಚಲಾಯಿಸಲೆತ್ನಿಸಿದ ತಹಶೀಲ್ದಾರ್ ಪಂಡಿತ್ ಬಿರಾದಾರ್ ಕಾರು ಕೊಚ್ಚಿ ಹೋಗಿದ್ದು ಆಪತ್ತಿಗೆ ಸಿಲುಕಿದ ತಹಸೀಲ್ದಾರ್ ಮರ ಹತ್ತಿ ಕುಳಿತಿದ್ದಾರೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಣಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಸೇತುವೆ ದಾಟುತ್ತಿದ್ದ ವೇಳೆ ನೀರು ಹೆಚ್ಚಿದ್ದು ಅಪಾಯ ಎದುರಾಗಿತ್ತು. ಕಾರು ನೀರಿನಲ್ಲಿ ಮುಂದೆ ಚಲಿಸಲ್ಲ ಎಂದು ತಿಳಿದ ತಹಸೀಲ್ದಾರ್ ಮತ್ತು ಚಾಲಕ ಕಾರಿನಿಂದ ಇಳಿದು ನಡೆದುಕೊಂಡು ಹೋಗಿದ್ದಾರೆ. ಆದರೆ ಪ್ರವಾಹದ ನೀರಿನಲ್ಲಿ ಹೋಗಲು ಸಾಧ್ಯವಾಗದೆ ರಕ್ಷಣೆಗಾಗಿ ಅಲ್ಲಿಯೇ ಇದ್ದ ಮರ ಹತ್ತಿದ್ದಾರೆ. ಅಲ್ಲದೆ, ಮರದಿಂದಲೇ ರಕ್ಷಣೆಗಾಗಿ ಗೋಗರೆದಿದ್ದಾರೆ. ಪೋನ್ ಮುಖಾಂತರ ಇತರ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ‘ನಾನು ಪ್ರವಾಹದಲ್ಲಿ ಸಿಲುಕಿದ್ದೇನೆ. ಮರದ ಮೇಲಿದ್ದೇನೆ’ ಎಂದು ಹೇಳಿದ್ದಾರೆ.

ಅಪಾಯದಲ್ಲಿ ಸಿಲುಕಿರುವ ಅಧಿಕಾರಿಯ ರಕ್ಷಣೆಗೆ ಕೂಡಲೇ ಪೊಲೀಸರ ತಂಡ ಧಾವಿಸಿದೆ. ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಹಾಗೂ ಡಿವೈಎಸ್ಪಿ ವೀರಭದ್ರಯ್ಯ ಮತ್ತು ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಮಿರಿಯಾಣ ಠಾಣೆಯ ಸಬ್ ಇನಸ್ಪೆಕ್ಟರ್ ಸಂತೋಷ ರಾಠೋಡ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ರಕ್ಷಣೆಗೆ ಧಾವಿಸಿದ್ದಾರೆ. ಕೊನೆಗೆ ಪ್ರವಾಹದ ನೀರಿನ ಮಧ್ಯೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಸಿಕ್ಕಿಬಿದ್ದ ತಹಸೀಲ್ದಾರ್ ಅವರನ್ನು ರಕ್ಷಣಾ ಸುರಕ್ಷಿತವಾಗಿ ಪಾರು ಮಾಡಿದೆ. ಮೂರು ಗಂಟೆಗಳ ಕಾರ್ಯಾಚರಣೆಯಲ್ಲಿ ಅಧಿಕಾರಿಯನ್ನು ರಕ್ಷಿಸಿ ಕರೆತಂದಿದ್ದು , ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm