ಬ್ರೇಕಿಂಗ್ ನ್ಯೂಸ್
24-01-22 05:35 pm HK Desk news ಕರ್ನಾಟಕ
ಬೆಂಗಳೂರು, ಜ.24 : ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೊಮ್ಮಾಯಿ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಸ್ತುವಾರಿ ಮಾಡಲಾಗಿದೆ. ಸಂಪುಟ ಪುನಾರಚನೆ ಆಗುತ್ತೆ, ಹಳಬರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುತ್ತೆ ಎಂಬ ವದಂತಿ, ಆಗ್ರಹದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪೂರ್ಣಕಾಲಿಕ ಉಸ್ತುವಾರಿ ನೇಮಕ ಮಾಡಿದ್ದು ಅಚ್ಚರಿ ಮೂಡಿಸಿದೆ.
ಬೆಂಗಳೂರು ನಗರದ ಉಸ್ತುವಾರಿಯನ್ನು ಸಿಎಂ ಸ್ವತಃ ತನ್ನಲ್ಲಿ ಇಟ್ಟುಕೊಂಡಿದ್ದಾರೆ. ಶಿವಮೊಗ್ಗಕ್ಕೆ ಕೆ.ಸಿ.ನಾರಾಯಣ ಗೌಡ, ಚಿಕ್ಕಮಗಳೂರಿಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆಯಾ ಭಾಗದ ಸಚಿವರಿಗೆ ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಿ ಉಸ್ತುವಾರಿ ನೀಡಿಕೆಯಲ್ಲೂ ಸಿಎಂ ಬೊಮ್ಮಾಯಿ ಚಾಣಾಕ್ಷತನ ತೋರಿದ್ದಾರೆ. ಕರಾವಳಿಯಲ್ಲಿ ನಾರಾಯಣ ಗುರು ವಿಚಾರದಲ್ಲಿ ಬಿಲ್ಲವರ ಆಕ್ರೋಶ ಕೇಳಿಬರುತ್ತಿರುವ ನಡುವೆಯೇ ಬಿಲ್ಲವ ಸಮುದಾಯದ ಸುನಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆಗಿ ನೇಮಿಸಿ ಸಮಾಧಾನಿಸುವ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
Chief minister Basavaraj Bommai has announced the district in-charge ministers for Dakshina Kannada and Udupi on Monday, January 24. V Sunil Kumar will be the district in-charge of Dakshina Kannada and S Angara will be in-charge of Udupi district.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 08:19 pm
Mangalore Correspondent
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm