ಬ್ರೇಕಿಂಗ್ ನ್ಯೂಸ್
26-01-22 03:03 pm HK Desk news ಕರ್ನಾಟಕ
ಚಿಕ್ಕೋಡಿ, ಜ.26 : ಪ್ರವಾಹ ಸಂದರ್ಭದಲ್ಲಿ ಕಾಮಗಾರಿ ನಡೆಸದೆ ನಕಲಿ ದಾಖಲೆ ಸೃಷ್ಟಿಸಿ ಅವ್ಯವಹಾರ ಎಸಗಿದ ಒಂದೇ ಇಲಾಖೆಯ ಇಪ್ಪತ್ತು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಶಾಸಕ ಮಹೇಶ ಕುಮಠಳ್ಳಿ ಮನೆಯ ಪಕ್ಕದಲ್ಲೆ ಇರುವ ಹೆಸ್ಕಾಮ್ ಕಚೇರಿಯಲ್ಲಿ ಬಹುಕೋಟಿ ಹಗರಣ ಬಯಲಿಗೆ ಬಂದಿದೆ.
ಪ್ರವಾಹ ಕಾಮಗಾರಿ ಹೆಸರಲ್ಲಿ ಭಾರೀ ಭ್ರಷ್ಟಾಚಾರ ಎಸಗಿದ್ದು ಇದಕ್ಕೆ ಕಾರಣವಾದ ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯ ಇಪ್ಪತ್ತು ಮಂದಿ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.
ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎನ್ನಲಾಗುತ್ತಿದ್ದು ಇಪ್ಪತ್ತು ಜನ ಹೆಸ್ಕಾಮ್ ಅಧಿಕಾರಿಗಳು ಅಮಾನತ್ತುಗೊಂಡಿದ್ದಾರೆ. ಮಳೆ ಗಾಳಿಗೆ ಬಿದ್ದ ವಿದ್ಯುತ್ ಕಂಬಗಳ ರಿಪೇರಿ, ವಿದ್ಯುತ್ ಪರಿವರ್ತಕಗಳ ಬದಲಾವಣೆ, ವಿದ್ಯುತ್ ತಂತಿ ಬದಲಾವಣೆ ಸೇರಿದಂತೆ ಹೆಸ್ಕಾಮ್ ವಿಭಾಗದಲ್ಲಿ ಕೋಟ್ಯಂತರ ರೂ. ಮೊತ್ತದ ಕಾಮಗಾರಿ ನಡೆದಿದ್ದಾಗಿ ತೋರಿಸಲಾಗಿತ್ತು.
ಸಹಾಯಕ ಕಾರ್ಯ ನಿರ್ವಾಹಕ ಇಂಜನಿಯರುಗಳಾದ ಎಸ್. ಎಚ್ ಬಹುರೂಪಿ, ಆರ್. ಎಚ್ ಕಲಾರಿ, ಗೀತಾ ಕಡ್ಲಾಸ್ಕರ್, ಜಿ.ವಿ ಸಂಪನ್ನವರ, ವಿ.ಜಿ ನಾಯಕ ಮತ್ತು ಲೆಕ್ಕಾಧಿಕಾರಿ ಬಿ. ಎಂ ಪಾಟೀಲ, ಸಹಾಯಕ ಲೆಕ್ಕಾಧಿಕಾರಿಗಳಾದ ವೈ.ಎಸ್ ಕೆಳಗಡೆ, ಸಹಾಯಕ ಇಂಜನಿಯರಗಳಾದ ಮಲಕಪ್ಪ, ವಿ ಎ ಗಣಿ,ಎಸ್ ಬಿ ಬುಳ್ಳಗೌಡ, ಡಿ ಕೆ ಕಾಂಬಳೆ, ಆರ್ ಸಿ ರಾಠೋಡ ಹಾಗೂ ಕಿರಿಯ ಇಂಜನೀಯರ್ ಗಳಾದ ಎಸ್. ಎ ಪಾರ್ಥನಳ್ಳಿ, ಎನ್ ಬಿ ನೇಮಣ್ಣವರ, ಬಿ.ಎಸ್ ಶೀಲವಂತರ, ಎಸ್.ಬಿ ಮಹೀಷವಾಡಗಿ, ಜಿ.ಎಸ್ ಕೋಲಕಾರ, ಹಿರಿಯ ಸಹಾಯಕರಾಗಿ ಕರ್ತವ್ಯ ನಿರ್ವಹುಸುತ್ತಿದ್ದ ಎಂ.ಕೆ ಕುಲಕರ್ಣಿ, ಆಪರೇಟರ್ ಆಗಿದ್ದ ಸಿ.ಕೆ ಹಿರೇಮಠ ಮತ್ತು ಮಾಪಕ ಓದುಗ ಕೆ ಎಸ್ ಠಕ್ಕನ್ನವರ ಸೇರಿದಂತೆ ಇಪ್ಪತ್ತು ಜನರ ಅಮಾನತ್ತು ಆದೇಶ ಹೊರಬಿದ್ದಿದೆ.

ಸರ್ಕಾರದ ಯೋಜನೆಗಳಾದ ಗಂಗಾ ಕಲ್ಯಾಣ, ಕಾಪೆಕ್ಸ್, ವಾಟರ್ ಸಪ್ಲೈ, ಓಟಿ ಎಂ , ಪ್ಲಡ್ ಮತ್ತು ಅಡಿಷನಲ್ ಟಿಸಿ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿ ಅನುಷ್ಠಾನದಲ್ಲಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅಮಾನತ್ತುಗೊಳಿಸಲಾಗಿದೆ. ಶಾಸಕ ಮಹೇಶ ಕುಮಠಳ್ಳಿ ಮತಕ್ಷೇತ್ರದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಅನ್ನುವದಕ್ಕೆ ಈ ಅಮಾನತ್ತು ಆದೇಶ ಕನ್ನಡಿ ಹಿಡಿದಂತಾಗಿದೆ. ಈ ಹಗರಣ ಹೊರಬಂದ ಮೇಲೆ ಇದೇ ರೀತಿಯ ಭ್ರಷ್ಟಾಚಾರದ ಬಗ್ಗೆ ಇತರ ಇಲಾಖೆಗಳ ಮೇಲೂ ಜನ ಸದ್ಯ ಅನುಮಾನದಿಂದ ನೋಡುವಂತಾಗಿದೆ.
Chikodi Flood relief crore scam 20 officers of the same department suspended for creating fake documents.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm