ಬ್ರೇಕಿಂಗ್ ನ್ಯೂಸ್
17-09-20 04:37 pm Bangalore Correspondent ಕರ್ನಾಟಕ
ಬೆಂಗಳೂರು, ಸಪ್ಟೆಂಬರ್ 17: ಕೊರೊನಾ ಬಾಧಿತರಾಗಿ ತೀವ್ರ ನಿಗಾ ಘಟಕದಲ್ಲಿದ್ದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ(55) ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ್ ಗಸ್ತಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಉಳಿಸಲಾಗಿತ್ತು. ನಿನ್ನೆ ಸಂಜೆ ಹೊತ್ತಿಗೆ ಗಸ್ತಿಯವರು ಸಾವನ್ನಪ್ಪಿದ್ದಾಗಿ ಸುದ್ದಿಗಳು ಹರಿದಾಡಿದ್ದವು. ಬಳಿಕ ರಾಜ್ಯ ಬಿಜೆಪಿ ಮತ್ತು ಆಸ್ಪತ್ರೆಯ ವೈದ್ಯರು ಅಶೋಕ್ ಗಸ್ತಿಯವರನ್ನು ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ. ದೇಹ ಸ್ಥಿತಿ ಗಂಭೀರವಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಸಾವನ್ನಪ್ಪಿದ ಸುದ್ದಿ ಬರಿಯ ವದಂತಿ ಅಷ್ಟೇ ಎಂದು ಸ್ಪಷ್ಟನೆಯಲ್ಲಿ ತಿಳಿಸಲಾಗಿತ್ತು. ಆದರೆ, ರಾತ್ರಿ 11 ಗಂಟೆ ವೇಳೆಗೆ ಆಸ್ಪತ್ರೆಯ ವೈದ್ಯರು ಹೇಳಿಕೆ ಬಿಡುಗಡೆ ಮಾಡಿದ್ದು ಅಶೋಕ್ ಗಸ್ತಿಯವರನ್ನು ಉಳಿಸಲು ಬಹಳಷ್ಟು ಪ್ರಯತ್ನ ಮಾಡಲಾಯಿತು. ಕೊರೊನಾ ಜೊತೆ ನ್ಯುಮೋನಿಯಾ ಬಾಧಿಸಿದ್ದರಿಂದ ಬಹು ಅಂಗಾಂಗ ವೈಫಲ್ಯಕ್ಕೀಡಾಗಿದ್ದರು. ರಾತ್ರಿ 10.30 ರ ವೇಳೆಗೆ ಕೊನೆಯುಸಿರೆಳೆದರು ಎಂದು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯ ಮೂಲದ ಅಶೋಕ್ ಗಸ್ತಿ ಬಿಜೆಪಿಯ ಶಿಸ್ತಿನ ಕಾರ್ಯಕರ್ತರಾಗಿದ್ದರು. ಅತ್ಯಂತ ಹಿಂದುಳಿದ ಸವಿತಾ ಸಮಾಜದವರಾಗಿದ್ದ ಗಸ್ತಿಯವರ ಪಕ್ಷ ನಿಷ್ಠೆ ಮತ್ತು ಸುದೀರ್ಘ ಸೇವೆಯನ್ನು ಪರಿಗಣಿಸಿ, ಅವರನ್ನು ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು. ಉದ್ಯಮಿಗಳು, ಹಣ ಇದ್ದವರು ಮಾತ್ರ ರಾಜ್ಯಸಭೆಗೆ ಹೋಗುತ್ತಿದ್ದ ಕಾಲದಲ್ಲಿ ಅಶೋಕ್ ಗಸ್ತಿಯವರಂತಹ ಬಡ ಕಾರ್ಯಕರ್ತನನ್ನು ಬಿಜೆಪಿ ಪರಿಗಣಿಸಿದ್ದು ಚರ್ಚೆಗೆ ಕಾರಣವಾಗಿತ್ತು.
ಅಶೋಕ ಗಸ್ತಿ ಅವರಿಗೆ ಸೆಪ್ಟೆಂಬರ್ 2ರಂದು ಕೊರೊನಾ ದೃಢಪಟ್ಟಿತ್ತು. ಆರಂಭದಲ್ಲಿ ರೋಗ ಲಕ್ಷಣ ಇಲ್ಲದಿದ್ದರೂ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಅಶೋಕ್ ಗಸ್ತಿ ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರಿಗೂ ಕೊರೋನಾ ಪಾಸಿಟಿವ್ ಆಗಿತ್ತು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm