ಬ್ರೇಕಿಂಗ್ ನ್ಯೂಸ್
05-02-22 02:21 pm HK Desk news ಕರ್ನಾಟಕ
ಮೈಸೂರು, ಫೆ.5 : ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಕಿಡಿ ಹೊತ್ತಿಸಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್, ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ಪರಿಸ್ಥಿತಿ ಕೈಮೀರುವ ಮುನ್ನ ಎಚ್ಚತ್ತುಕೊಳ್ಳಿ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ಸಮುದಾಯದಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ & ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ.

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸರ್ವೇ ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಹಿಜಾಬ್ ವಿವಾದ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದು ಕಾಂಗ್ರೆಸ್ ಶಾಸಕ ತನ್ವೀರ್ಸೇಠ್ ಎಚ್ಚರಿಕೆ ನೀಡಿದ್ದಾರೆ.
Tanveer Sait writes letter to State Government to awake before things get worse on Hijab row in Karnataka.
17-01-26 05:29 pm
Bangalore Correspondent
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm