ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm