ಬ್ರೇಕಿಂಗ್ ನ್ಯೂಸ್
14-02-22 05:28 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.14 : ಆನ್ಲೈನ್ ಗೇಮ್ಗಳು ಸೇರಿದಂತೆ ಬೆಟ್ಟಿಂಗ್ ಹಾಗೂ ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಈ ತಿದ್ದುಪಡಿ ಸಂವಿಧಾನಬಾಹಿರವೆಂದು ಹೇಳಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ ಹೊಸ ಕಾಯಿದೆ ಮಾಡಬಹುದೆಂದು ಹೇಳಿದೆ.
ರಾಜ್ಯ ಸದ್ಯ ಆನ್ ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ''ಆಟದ ಫಲಿತಾಂಶದ ಬಗ್ಗೆ ತಿಳಿಯದಿರುವಾಗ ಆಟದ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುವುದು ಆಯ್ಕೆಯೋ ಅಥವಾ ಕೌಶಲವೋ ಅದು ಬಾಜಿಗೆ ಸಮನಾಗಿರುತ್ತದೆ'' ಎಂದು ವಾದಿಸಿದ್ದರು.
ಕುದುರೆ ಓಟ ಮತ್ತು ಲಾಟರಿ ಹೊರತುಪಡಿಸಿ ಇತರೆ ಯಾವುದೇ ಆಟಕ್ಕೆ ಹಣವನ್ನು ಪಣವಾಗಿ ಕಟ್ಟುವ ಆನ್ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ನಿಷೇಧಿಸಲಾಗಿದ್ದು, ಜಾಮೀನು ರಹಿತ ಅಪರಾಧ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು.
The Karnataka High Court on Monday struck down a state government law that banned online gambling. The Karnataka government had notified the law banning betting and wagering in online games in October last year, after Governor Thawar Chand Gehlot gave his assent. Since then, fantasy gaming platforms like Dream11, Mobile Premier League have suspended their operations in the state.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm