ಬ್ರೇಕಿಂಗ್ ನ್ಯೂಸ್
17-02-22 09:53 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ರಾಜ್ಯದಲ್ಲಿ ಹಿಜಾಬ್ ವಿವಾದದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುರುವಾರವೂ ಹಲವೆಡೆ ಹಿಜಾಬ್ ಪರವಾಗಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದು ವಿದ್ಯಾರ್ಥಿನಿಯರ ಜೊತೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಕೂಡ ಹೋರಾಟಕ್ಕೆ ಕೈಜೋಡಿಸಿದ್ದಾರೆ.
ಶಿವಮೊಗ್ಗ ನಗರದ ಡಿವಿಎಸ್ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು. ಉಡುಪಿ ಎಂಜಿಎಂ ಕಾಲೇಜಿನಲ್ಲಿ ಇಂದು ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಪ್ರಾಕ್ಟಿಕಲ್ ಪರೀಕ್ಷೆಯನ್ನು ಹಿಜಾಬ್ ವಿವಾದದ ಹಿನ್ನೆಲೆ ಮುಂದೂಡಲಾಗಿದೆ.

ಬೆಳಗಾವಿಯ ವಿಜಯಾ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಕೆಲವು ಮುಸ್ಲಿಂ ಯುವಕರು ಕಾಲೇಜು ಬಳಿ ಜಮಾಯಿಸಿ ಪ್ರಾಚಾರ್ಯರ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಅಲ್ಲದೆ, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಪೋಷಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಆರು ಮಂದಿ ಯುವಕರನ್ನ ವಶಕ್ಕೆ ಪಡೆದಿದ್ದಾರೆ. ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಈ ರೀತಿ ನಡೆದಿದ್ದು ಇದೇ ಮೊದಲು.
ವಿಜಯಪುರ ನಗರದಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಇವರಿಗೆ ಇತರ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.

ದಾವಣಗೆರೆಯ ಎವಿಕೆ ಮಹಿಳಾ ಕಾಲೇಜಿನ 42, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 4 ವಿದ್ಯಾರ್ಥಿನಿಯರು, ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 12, ಹರಿಹರದಲ್ಲಿ 7 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿ ತರಗತಿಗೆ ಹಾಜರಾಗದೆ ಮನೆಗೆ ತೆರಳಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಹೈಕೋರ್ಟ್ ಆದೇಶ ಧಿಕ್ಕರಿಸಿ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದರಿಂದ ಗೊಂದಲ ವಾತಾವರಣ ಉಂಟಾಗಿ ಪೊಲೀಸರು ಹಾಗೂ ಪಾಲಕರು, ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಸರಳಾ ದೇವಿ ಕಾಲೇಜಿನಲ್ಲಿ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದರು.
ಯಾದಗಿರಿ : ಸರ್ಕಾರಿ ಉರ್ದು ಶಾಲೆಯ ಮುಸ್ಲಿಂ ಮಕ್ಕಳು ತರಗತಿ ಬಹಿಷ್ಕರಿಸಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸ್ವಪ್ನ ಮೈದಾನದಲ್ಲಿರುವ ಪಿಯು ಕಾಲೇಜು ವಿದ್ಯಾರ್ಥಿಗಳೂ ತರಗತಿ ಬಹಿಷ್ಕಾರ ಮಾಡಿದರು. ಪ್ರತಿಭಟನೆಗೆ ಮುಂದಾಗಿದ್ದ ವಿದ್ಯಾರ್ಥಿನಿಯರ ಗುಂಪನ್ನು ಪೊಲೀಸರು ಚದುರಿಸಿದರು.
The tense situation continued in and around Karnataka colleges as the pre-university students wearing hijab demanded to be let inside classrooms. The hijab-clad students were sent back, and many protested the decision of college authorities. Some of them, who came in support of the hijab-wearing students near the Vijay Para-Medical College, were taken into custody in Belagavi.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm