ಬ್ರೇಕಿಂಗ್ ನ್ಯೂಸ್
19-02-22 11:55 am HK Desk news ಕರ್ನಾಟಕ
ಕಲಬುರ್ಗಿ, ಫೆ.19 : ಕೆಲವು ಕಾಲೇಜುಗಳಲ್ಲಿ ಹಿಜಾಬ್ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಲಾಗ್ತಿದೆ. ಗೊಂದಲ ಸೃಷ್ಟಿಸುವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅತಿರೇಕಕ್ಕೆ ಹೋದರೇ ಕೈಕಟ್ಟಿ ಕೂಡಲು ಆಗಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಾಲೆ, ಕಾಲೇಜು ಮುಂದೆ ಗಲಾಟೆ ಮಾಡಿಕೊಂಡಿದ್ದರೆ ಅದನ್ನು ಕಣ್ಣಿನಿಂದ ನೋಡಿಕೊಂಡು ಸುಮ್ಮನಿರಲು ಸಾಧ್ಯ ಇಲ್ಲ. ಇದರ ಹಿಂದೆ ಮತಾಂಧ ಶಕ್ತಿಗಳು ಕಾರ್ಯ ನಿರ್ವಹಿಸುತ್ತಿವೆ. ಮತಾಂಧರ ಶಕ್ತಿಗಳು ಮಕ್ಕಳಲ್ಲಿ ವಿಷಬೀಜ ಬಿತ್ತುತ್ತಿವೆ. ವಿವಾದ ಸೃಷ್ಟಿಸುವ ಸಂಘಟನೆಗಳನ್ನ ನಿರ್ಜೀವ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಲ್ಪಸಂಖ್ಯಾತ ಶಾಸಕರ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವು ಶಾಸಕರು ಭೇಟಿಯಾಗಿ ಮನವಿ ಪತ್ರ ಕೊಟ್ಟಿದ್ದಾರೆ. ಆದರೆ ಸಮಾಜದಿಂದ ಈಗಿರುವ ಸ್ಥಿತಿಯನ್ನ ಹೊರತರಬೇಕಾಗಿದೆ. ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ. ಸಮವಸ್ತ್ರ ಅಂದರೆ ಅದು ಸಮಾನತೆ, ಸಂಸ್ಕಾರ ತುಂಬುವ ಕೆಲಸ ಆಗಬೇಕು. ಮತ್ತೊಮ್ಮೆ ನಮ್ಮ ಧರ್ಮ, ಜಾತಿ ಒಂದೇ ಅಂತಾ ತೋರಿಸಬೇಕು. ಕೋರ್ಟ್ ಆದೇಶದ ಪ್ರಕಾರ ನಡೆದುಕೊಳ್ಳಬೇಕು ಎಂದರು.

ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಹೋರಾಟ ವಿಚಾರದ ಬಗ್ಗೆ ಹೇಳಿದ ಅವರು, ಈಶ್ವರಪ್ಪ ಯಾವ ಶಬ್ದ ಹೇಳಿದಾರೆ ಅನ್ನೊದು ಪೂರ್ತಿ ಪ್ರಸಾರ ಮಾಡಬೇಕು. ಈಶ್ವರಪ್ಪ ಹೇಳಿದ್ರಲ್ಲಿ ತಪ್ಪು ಇಲ್ಲ, ತಪ್ಪಾಗಿ ಅಥೈಸಿಕೊಳ್ಳಲಾಗ್ತಿದೆ. ರಾಷ್ಟ್ರ ಧ್ವಜ ಇಳಿಸಿ ಎಬಿವಿಪಿ ಧ್ವಜ ಏರಿಸಲಾಗಿದೆ ಅಂತಾ ಹೇಳಿರುವುದು ಸುಳ್ಳು. ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಈಶ್ವರಪ್ಪ ಹೇಳಿಲ್ಲ. ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ, ಮುಂದೊಂದು ದಿನ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಸಂದರ್ಭ ಬರಬಹುದು ಅಂದಿದ್ದಾರೆ ಅಷ್ಟೆ. ಮುಳುಗೋನಿಗೆ ಹುಲ್ಲು ಕಡ್ಡಿ ಆಧಾರ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದೆ. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋದನ್ನ ಬಿಟ್ಟು ಕಾಂಗ್ರೆಸ್ ಕಾಲಹರಣ ಮಾಡ್ತಿದೆ. ಒಂದು ಸುಳ್ಳನ್ನ ನೂರು ಬಾರಿ ಹೇಳಿದ್ರು ಅದು ಸತ್ಯವಾಗಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
Behind Hijab row there are lot of communal organisations states Karnataka Home Minister.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm