ಬ್ರೇಕಿಂಗ್ ನ್ಯೂಸ್
19-02-22 01:15 pm HK Desk news ಕರ್ನಾಟಕ
ಶಿವಮೊಗ್ಗ, ಫೆ.19 : ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.
ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
A controversy has erupted after reports of the suspension of 58 students of a Karnataka college for protesting against hijab restrictions in Shivamogga district surfaced online.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm