ಬ್ರೇಕಿಂಗ್ ನ್ಯೂಸ್
19-02-22 02:03 pm HK Desk news ಕರ್ನಾಟಕ
ತುಮಕೂರು, ಫೆ.19 : ಹಿಜಾಬ್ ಗಲಾಟೆಯ ಪರಿಣಾಮ ವಿದ್ಯಾರ್ಥಿಗಳ ಮೇಲೆ ಮಾತ್ರ ಬೀರಿದ್ದಲ್ಲ. ಕೆಲವು ಕಡೆ ಕಾಲೇಜು ಶಿಕ್ಷಕರ ಮೇಲೂ ಗಂಭೀರ ಪರಿಣಾಮ ಬೀರಿದೆ. ತುಮಕೂರಿನಲ್ಲಿ ಹಿಜಾಬ್ ಹಾಕಲು ನಿರ್ಬಂಧ ಹಾಕಿದ ನೆಪದಲ್ಲಿ ಇಂಗ್ಲಿಷ್ ಉಪನ್ಯಾಸಕಿಯೊಬ್ಬರು ಕೆಲಸವನ್ನೇ ತ್ಯಜಿಸಿದ್ದಾರೆ.
ಜೈನ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಚಾಂದಿನಿ ಹಿಜಾಬ್ ಕಾರಣಕ್ಕೆ ಉದ್ಯೋಗವನ್ನೇ ತ್ಯಜಿಸಿದ ಯುವತಿ. ಇದು ನನ್ನ ವೈಯಕ್ತಿಕ ಗೌರವದ ವಿಚಾರ. ಹಿಜಾಬ್ ಇಲ್ಲದೆ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಚಾಂದಿನಿ ಹೇಳಿದ್ದಾರೆ.

ಜೈನ್ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಈಗ ಪ್ರಾಂಶುಪಾಲರು ಕರೆದು ಹಿಜಾಬ್ ತೆಗೆದು ತರಗತಿಯಲ್ಲಿ ಪಾಠ ಮಾಡುವಂತೆ ಸೂಚಿಸಿದ್ದಾರೆ. ಈವರೆಗೂ ಹಿಜಾಬ್ ಧರಿಸಿಯೇ ಪಾಠ ಮಾಡಿದ್ದೇನೆ. ಈಗ ಹಿಜಾಬ್ ತೆಗೆಯಲು ಹೇಳಿದ್ದು ನನಗೆ ಹರ್ಟ್ ಆಗಿದೆ. ಗೌರವಕ್ಕೆ ಧಕ್ಕೆಯಾಗಿದೆ. ನನಗೆ ಮುಂದೆ ಈ ಕಾಲೇಜಿನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಜಿನಾಮೆ ನೀಡಿದ್ದೇನೆ ಎಂದು ಚಾಂದಿನಿ ಹೇಳಿದ್ದಾರೆ.
ಧರ್ಮದ ಪ್ರಕಾರ ನಡೆದುಕೊಳ್ಳುವುದು ಸಂವಿಧಾನ ಕೊಟ್ಟಿರುವ ಹಕ್ಕು. ಇದನ್ನು ಯಾರು ಕೂಡ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ನಾನು ಖಂಡಿಸುತ್ತೇನೆ ಎಂದವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಲೇಜಿನ ಆಡಳಿತ ನಿರಾಕರಿಸಿದೆ.
ಹೈಕೋರ್ಟಿನಲ್ಲಿ ಹಿಜಾಬ್ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಮಧ್ಯಂತರ ಆದೇಶದಲ್ಲಿ ಯಾರು ಕೂಡ ಧಾರ್ಮಿಕ ವಸ್ತ್ರ, ಗುರುತುಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿತ್ತು. ಈ ಬಗ್ಗೆ ರಾಜ್ಯದೆಲ್ಲೆಡೆ ಮುಸ್ಲಿಮರಿಂದ ವಿರೋಧ ಕೇಳಿಬಂದಿದ್ದು ಇದರ ಪರಿಣಾಮ ಈಗ ಕಾಲೇಜು ಉಪನ್ಯಾಸಕರಿಗೂ ತಟ್ಟಿದೆ.
An English lecturer working as a guest faculty has resigned from her post as she was asked to shun the hijab while teaching in Tumakuru district of Karnataka on Friday. “It is a matter of my self-respect. I can’t teach without the hijab,” the lecturer Chandini said after quitting.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm