ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm