ಬ್ರೇಕಿಂಗ್ ನ್ಯೂಸ್
22-02-22 02:50 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿಯೇ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಆದರೆ ಸೋಮವಾರ ಸಚಿವರು, ಬಿಜೆಪಿ ನಾಯಕರು ಸೇರಿ ಮೆರವಣಿಗೆ ಮಾಡಿದ್ದಾರೆ. ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಗಲಾಟೆ. ಇವರೇ ಸೆಕ್ಷನ್ ಉಲ್ಲಂಘಿಸಿ, ಕಲ್ಲು ತೂರಾಟ ಮಾಡಿಸಿ, ಅಲ್ಲಿನ ಗಲಾಟೆಗೆ ಕಾರಣವಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ಘಟನೆಗಳಿಗೆ ಹೊಣೆ ಯಾರು ? ಮಾಜಿ ಸಿಎಂ ಯಡಿಯೂರಪ್ಪ, ಹೋಮ್ ಮಿನಿಸ್ಟರ್, ಈಶ್ವರಪ್ಪ ಅದೇ ಜಿಲ್ಲೆಯವರು. 144 ಸೆಕ್ಷನ್ ಜಾರಿ ಇರುವಾಗ ಮೆರವಣಿಗೆ ಮಾಡಲು ಯಾಕೆ ಅವಕಾಶ ಕೊಟ್ಟರು. ಸಂಸದ ರಾಘವೇಂದ್ರ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು. ಹೀಗಾಗಿ ಇದನ್ನು ಸರ್ಕಾರದ ಪ್ರಾಯೋಜಿತ ಮೆರವಣಿಗೆ ಎನ್ನಬೇಕು. ಮೆರವಣಿಗೆಯಲ್ಲಿ ಇವರ ನಡುವೆಯೇ ಕಲ್ಲು ತೂರಾಟ ನಡೆಯುತ್ತದೆ. ಒಬ್ಬ ಸಚಿವ, ಒಬ್ಬ ಸಂಸದ ಇದ್ದೂ ಸೆಕ್ಷನ್ ಉಲ್ಲಂಘನೆ ಆಗಿದೆ. ಸರ್ಕಾರದ ಯಾರದ್ದು ಇರೋದು ? ಶಿವಮೊಗ್ಗದಲ್ಲಿ ಆಸ್ತಿ ಪಾಸ್ತಿಗೆ ಹಾನಿಯಾಗಿದ್ದವರೇ, ಅದಕ್ಕೆ ಬಿಜೆಪಿ, ಬಜರಂಗದಳ ಕಾರಣ. ದೊನ್ನೆ,ಕತ್ತಿ, ತಲ್ವಾರ್ ಇಡಕೊಂಡು ಮೆರವಣಿಗೆ ಮಾಡಿದ್ದಾರೆ. ಇದು ಮಾನವೀಯತೆ ಇರುವ ಸರ್ಕಾರನಾ.. ಇದು ಗೂಂಡಾಗಳ ಸರ್ಕಾರ. ಒಬ್ಬ ಸಚಿವರೇ ಸೆಕ್ಷನ್144 ಗೌರವಿಸದಿದ್ದರೇ ಇದನ್ನು ಸರ್ಕಾರ ಎನ್ನಲಿಕ್ಕಾಗುತ್ತಾ.. ಇದಕ್ಕೆಲ್ಲ ನೇರವಾಗಿ ಈಶ್ವರಪ್ಪ ಹಾಗೂ ಬಿವೈ ರಾಘವೇಂದ್ರ ಹೊಣೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸರ್ಕಾರದ ಇವರದ್ದೇ ಇದೆ. ಕೊಲೆ ಘಟನೆ ಹಿಂದೆ ಸಿಎಫ್ಐ, ಎಸ್ಡಿಪಿಐ ಬಗ್ಗೆ ಸಾಕ್ಷಿಗಳು ಇದ್ದರೆ ಬ್ಯಾನ್ ಮಾಡಲಿ. ಇದಕ್ಕೆ ನಮ್ಮ ತಕರಾರು ಇಲ್ಲ. ಸಾರ್ವಜನಿಕರ ಆಸ್ತಿ ಹಾನಿಯಾಗಿದೆ. ಮಾಧ್ಯಮದವರ ಮೇಲೆ ಹಲ್ಲೆ ಆಗಿದೆ. ಇದು ಸರ್ಕಾರದ ಜವಬ್ದಾರಿನಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಈಶ್ವರಪ್ಪ ಕೇಸರಿ ಬಾವುಟ ಹಾರಿಸ್ತೇವೆ ಎಂಬ ಹೇಳಿಕೆಯ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಷ್ಟ್ರೀಯ ಖಾಸಗಿ ವಾಹಿನಿಗೆ ಸಂದರ್ಶನ ಕೊಟ್ಟಿದ್ದಾರೆ. ಈಶ್ವರಪ್ಪ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ. ಆಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಒತ್ತಾಯ ಮಾಡ್ತೇವೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲು ಆಗಬೇಕು. ಈ ಬಗ್ಗೆ ಸಂಜೆ ರಾಜ್ಯಪಾಲರನ್ನ ಭೇಟಿ ಮಾಡ್ತೇವೆ. ವಿಧಾನಸೌಧದಿಂದ ರಾಜಭವನಕ್ಕೆ ವಾಕ್ ಮಾಡುತ್ತೇವೆ. ಈಶ್ವರಪ್ಪ ಅವರನ್ನು ಪದಚ್ಯುತಿ ಮಾಡುವಂತೆ ಒತ್ತಾಯಿಸುತ್ತೇವೆ ಎಂದರು ಸಿದ್ದರಾಮಯ್ಯ.
Eshwarappa violated Section 144 to take Bajrang Dal activists body home, claims Siddaramaiah
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm