ಬ್ರೇಕಿಂಗ್ ನ್ಯೂಸ್
22-02-22 09:48 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 22 : ಕನ್ನಡದ ಹೆಸರಾಂತ ರೇಡಿಯೋ ನಿರೂಪಕಿ ಆರ್ ಜೆ ರಚನಾ ಇನ್ನಿಲ್ಲ. ತೀವ್ರ ಹೃದಯಾಘಾತದಿಂದ ರಚನಾ ನಿಧನ ಹೊಂದಿದ್ದಾರೆ.
ಆರ್ ಜೆ ರಚನಾ ತಮ್ಮ ಕಂಠ ಸಿರಿಯಿಂದಲೇ ಹೆಸರುವಾಸಿ ಆಗಿದ್ದರು. ರೇಡಿಯೋ ಮಿರ್ಚಿ ಮೂಲಕ ಅವರು ತಮ್ಮ ರೇಡಿಯೋ ಜಾಕಿ ಪಯಣ ಆರಂಭಿಸಿದ್ದರು. ನಂತರ ರೇಡಿಯೋ ಸಿಟಿಯಲ್ಲಿಯೂ ಅವರು ಕೆಲಸ ಮಾಡಿದ್ದಾರೆ. ಆರ್ ಜೆ ರಚನಾ ಕಾರ್ಯಕ್ರಮಗಳು ಎಂದರೆ ಅತ್ಯಂತ ಜನಪ್ರಿಯ ಆಗಿದ್ದವು. ಆದರೆ ಕಿರಿವಯಸ್ಸಿನಲ್ಲೇ ರಚನಾ ಅವರು ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ.
ಕೇವಲ ರೇಡಿಯೋ ಜಾಕಿ ಆಗಿ ಮಾತ್ರ ಅಲ್ಲಾ, ಅವರು ಹಲವಾರು ವೇದಿಕೆ ಕಾರ್ಯಕ್ರಮಗಳನ್ನು ಕೂಡ ನಿರೂಪಣೆ ಮಾಡಿದ್ದಾರೆ, ಕನ್ನಡ ಚಿತ್ರರಂಗದ ಹಲವಾರು ತಾರೆಯರ ಸಂದರ್ಶನ ಮಾಡಿ ರಚನಾ ಸೈ ಎನಿಸಿಕೊಂಡಿದ್ದಾರೆ.

ಆರ್ ಜೆ ಆಗಿ ಹೆಸರು ಮಾಡಿದ್ದ ರಚನಾ ಅವರು ಆರೇಳು ವರ್ಷಗಳ ಹಿಂದೆಯೇ ರೇಡಿಯೋ ಜಾಕಿ ವೃತ್ತಿಗೆ ವಿದಾಯ ಹೇಳಿದ್ದರು. ನಂತರ ಅವರು ಸ್ನೇಹಿತರ ವಲಯದಿಂದಲೂ ದೂರ ಉಳಿದಿದ್ದರಂತೆ. ಇವರ ಅಚಾನಕ್ ಸಾವು ಆರ್ ಜೆ ವಲಯಕ್ಕೆ ಶಾಕ್ ನೀಡಿದೆ. ರಚನಾಗೆ ಹೀಗೆ ಆಗಲು ಹೇಗೆ ಸಾಧ್ಯ ಎಂದು ಎಲ್ಲರು ಶಾಕ್ ಆಗಿದ್ದಾರೆ.
ಅಷ್ಟೇ ಅಲ್ಲ ರಚನಾ ಅವರು ತುಂಬಾನೇ ಡಿಪ್ರೆಷನ್ನಲ್ಲಿ ಇದ್ದರಂತೆ. ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನುತ್ತಿದೆ ರಚನಾ ಸ್ನೇಹಿತರ ಬಳಗ. ಸದ್ಯ ಕಾರ್ಡಿಯಾ ಕರೆಸ್ಟ್ನಿಂದ ಅವರು ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಖಿನ್ನತೆಯಿಂದ ಏನಾದರು ಹೆಚ್ಚು ಕಡಿಮೆ ಆಗಿರಬೇಕು ಎನ್ನುತ್ತಿದೆ ಸ್ನೇಹಿತ ವಲಯ. ಶಾಕ್ಗೆ ಒಳಗಾದ ಸ್ನೇಹಿತ ವರ್ಗ ದುಖಃದಿಂದಲೇ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ.

ಆರ್ಜೆ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕುಟುಂಬಸ್ಥರು ರಚನಾ ಅವರ ಅಂಗಾಂಗವನ್ನು ದಾನ ಮಾಡಿದ್ದಾರೆ. ಮುಂಜಾನೆ ಹೃದಯಘಾತವಾಗಿದ್ದ ಕಾರಣ ಅಪೋಲೊ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿತ್ತು. 12 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಚನಾ ಅವರ ನಿಧನಕ್ಕೆ ಚಿತ್ರರಂಗ, ಸಹದ್ಯೋಗಿಗಳು, ಅಪಾರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
Popular Kannada Radio Jockey, Rachana died of a cardiac arrest on Tuesday (February 22) at noon. She was 39. According to reports, Rachana complained of chest pain at her flat in JP Nagar and she was rushed to a nearby hospital where she was declared brought dead.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm